Thursday, June 18, 2026
Thursday, June 18, 2026

ತುರ್ತು ಚಿಕಿತ್ಸೆಗೆ ನೆರವಾಗಿ ಜೀವವುಳಿಸಿದ ಸಾಕುನಾಯಿ

Date:

ನಿಯತ್ತಿಗೆ ಇನ್ನೊಂದು ಹೆಸರೇ ನಾಯಿ. ಈಗ ಹೇಳು ಹೊರಟಿರುವ ವಿಷಯವು ಕೂಡ ಇದಕ್ಕೆ ಸಂಬಂಧಿಸಿದ್ದೆ…
ಇದೊಂದು ಮನ ಮಿಡಿಯುವ ವಿಷಯ.

ಕಟ್ಟಿಗೆ ತರಲು ಕಾಡಿಗೆ ಹೋದ ವ್ಯಕ್ತಿಯೊಬ್ಬ ನಿರ್ಜನ ಪ್ರದೇಶದಲ್ಲಿ ತಲೆ ಸುತ್ತಿ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ತನ್ನ ಸಾಕು ನಾಯಿಯಿಂದ ಈತ ಪತ್ತೆಯಾಗಿದ್ದಾನೆ.

ಈ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೂಡೂರಿನಲ್ಲಿ ನಡೆದಿದೆ.

ಈ ಊರಿನ ಶೇಖರಪ್ಪ ಎಂಬಾತ ಆಯನೂರಿನ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ. ಬೆಳಗ್ಗೆ ಸುಮಾರು 6 ಗಂಟೆಗೆ ಕಟ್ಟಿಗೆ ತರುವುದಕ್ಕೆ ಕಾಡಿಗೆ ಹೋಗಿದ್ದಾರೆ. ಸುಮಾರು 10 ಗಂಟೆಗೆ ಮನೆಗೆ ವಾಪಸ್ಸಾಗುತ್ತಿದ್ದವರು ಎಷ್ಟೊತ್ತಾದರೂ ಮನೆಗೆ ಬಂದಿಲ್ಲ. ಆದ್ದರಿಂದ, ಮನೆಯವರು ಊರಿನ ಒಂದಿಷ್ಟು ಜನರಿಗೆ ವಿಚಾರ ತಿಳಿಸಿದ್ದಾರೆ. ಊರಿನವರು ಈತನನ್ನು ಹುಡುಕಲು ಕಾಡಿಗೆ ಹೋಗಿದ್ದಾರೆ. ಕಾಡಿನಲ್ಲಿ ಎಷ್ಟು ಹುಡುಕಿದರು ಶೇಖರಪ್ಪನ ಸುಳಿವು ಸಿಗಲೇ ಇಲ್ಲ.

ಆದರೆ, ಈತ ಸಾಕಿದ್ದ ನಾಯಿಯೊಂದು ಶೇಖರಪ್ಪ ಇರುವ ಜಾಗ ಪತ್ತೆ ಹಚ್ಚಿದೆ. ಸುಮಾರು 4 ಗಂಟೆ ಸುಮಾರಿಗೆ ಶೇಖರಪ್ಪ ಇರುವ ಜಾಗಕ್ಕೆ ಊರಿನವರನ್ನು ಕರೆ ತಂದಿದೆ.
ತಕ್ಷಣವೇ ಶೇಖರಪ್ಪನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಈ ನಾಯಿ ಪ್ರತಿನಿತ್ಯ ಮಾಲೀಕನ ಜೊತೆಯಲ್ಲಿ ಹೋಗುತ್ತಿತ್ತಂತೆ. ಹಾಗಾಗಿಯೇ ಶೇಖರಪ್ಪನನ್ನು ಪತ್ತೆ ಮಾಡಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...