Wednesday, December 10, 2025
Wednesday, December 10, 2025

ಮಾಧ್ಯಮ ಅಕಾಡೆಮಿ ಜೊತೆ ಪತ್ರಿಕೋದ್ಯಮ ಕೋರ್ಸ್ ಆರಂಭ- ಅಶ್ವತ್ಥನಾರಾಯಣ

Date:

‘ಕೌಶಲಾಭಿವೃದ್ಧಿ ಇಲಾಖೆಯು ಕರ್ನಾಟಕ ಮಾಧ್ಯಮ ಅಕಾಡೆಮಿ ಸಹಯೋಗದಲ್ಲಿ ಪತ್ರಿಕೋದ್ಯಮ ಸರ್ಟಿಫಿಕೇಟ್ ಕೋರ್ಸ್‌ ಆರಂಭಿಸಲಿದೆ’ ಎಂದು ಉನ್ನತ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ ಅವರು ಹೇಳಿದ್ದಾರೆ.

ಪ್ರಸಾರ ಭಾರತಿ ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಜಂಟಿಯಾಗಿ ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ ಆಯೋಜಿಸಿದ್ದ ‘ಮಾಧ್ಯಮ ಮೈಲುಗಲ್ಲು ನಲವತ್ತರ ಹೊಸ್ತಿಲು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಪತ್ರಿಕೋದ್ಯಮ ಕ್ಷೇತ್ರದ ಈಗಿನ ಬೇಡಿಕೆಗೆ ಅನುಗುಣವಾಗಿ ಡಿಜಿಟಲ್ ತಂತ್ರಜ್ಞಾನದ ಬಳಕೆ ಸೇರಿದಂತೆ ಸಮಗ್ರ ಕಲಿಕೆಯ ಕೋರ್ಸ್ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.

ಪತ್ರಕರ್ತರ ಜ್ಞಾನ ಮತ್ತು ಕೌಶಲ ಅಭಿವೃದ್ಧಿಗೆ ಪೂರಕವಾಗಿ ಹೊಸ ಕೋರ್ಸ್ ಆರಂಭಿಸುವಂತೆ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಮನವಿ ಮಾಡಿದರು. ವೇದಿಕೆಯಲ್ಲೇ ಸ೦ದಿಸಿದ ಸಚಿವರು, ಸರ್ಟಿಫಿಕೇಟ್ ಕೋರ್ಸ್ ಆರಂಭಿಸುವ ತೀರ್ಮಾನ ಪ್ರಕಟಿಸಿದರು.

ನಟಿ ಪ್ರಿಯಾಂಕಾ ಉಪೇಂದ್ರ, ‘ಚಂದನದಲ್ಲಿ ಬಳಸುವ ಭಾಷೆಯ ಅತ್ಯುತ್ತಮವಾಗಿರುತ್ತದೆ. ಇದರಿಂದ ಕನ್ನಡ ಕಲಿಕೆಯಾಗುತ್ತದೆ’ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಡಿಸೆಂಬರ್ 12 & 13, ಶಿವಮೊಗ್ಗದಲ್ಲಿ ಕಂದಾಯ ಇಲಾಖಾ ನೌಕರರಿಂದ ” ಕಂದಾಯೋತ್ಸವ”- ವಿ.ಅಭಿಷೇಕ್

DC Shivamogga ಒತ್ತಡದಲ್ಲಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು ತಮ್ಮ...

MESCOM ಡಿಸೆಂಬರ್ 11 & 12 ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಲ್ಲ, ಒಳ ಮಂಡಳಿ ಪ್ರಕಟಣೆ

MESCOM ಶಿವಮೊಗ್ಗ ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ...

Department of School Education ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಮಗ್ರ ಚಾಂಪಿಯನ್ ಪಟ್ಟ

Department of School Education ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ...