Wednesday, April 23, 2025
Wednesday, April 23, 2025

ಹೊಯ್ಸಳ, ಕೆಳದಿ ಚನ್ನಮ್ಮ ಶೌರ್ಯ ಪ್ರಶಸ್ತಿ ಸೇರಿ ಐದು ಮಕ್ಕಳಿಗೆ ಪುರಸ್ಕಾರ

Date:

ಅಪ್ರತಿಮ ಸಾಹಸ ತೋರಿದ ಐವರು ಮಕ್ಕಳಿಗೆ 2022-23ನೇ ಸಾಲಿನ ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಸೋಮವಾರ ಪ್ರದಾನ ಮಾಡಲಾಯಿತು. ಬೆಂಗಳೂರಿನ ಕಬ್ಬನ್‌ ಉದ್ಯಾನದಲ್ಲಿರುವ ಜವಾಹರ ಬಾಲಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜವಾಹರ ಬಾಲಭವನ ಸೊಸೈಟಿ ಆಯೋಜಿಸಿದ್ದ ‘ಮಕ್ಕಳ ದಿನಾಚರಣೆ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಯಿತು.

ಪ್ರಶಸ್ತಿಯು .10 ಸಾವಿರ ನಗದು, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆಯನ್ನು ಒಳಗೊಂಡಿದೆ.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌, ಸಂವಿಧಾನಾತ್ಮಕವಾಗಿ ಕೊಡಲಾಗಿರುವ ಮೂಲಭೂತ ಹಕ್ಕುಗಳು ದೇಶದ ಪ್ರತಿಯೊಂದು ಮಗುವಿಗೂ ಸಿಗುವಂತಾಗಬೇಕು. ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್‌ ಮಾತನಾಡಿ, ಮಕ್ಕಳಿಗೆ ಪೌಷ್ಟಿಕ ಆಹಾರ, ಶಿಕ್ಷಣ ಒದಗಿಸುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಾಣದ ಗುರಿ ಹೊಂದಲಾಗಿದೆ. ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಿಂದ ಮಕ್ಕಳು ಹಾಗೂ ಮಹಿಳೆಯರಿಗೆ ಸಹಾಯಕವಾಗಿದೆ. ಹೆಣ್ಣು ಮಗುವಿನ ಉಳಿವು ಮತ್ತು ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಬಜೆಟ್‌ನಲ್ಲಿ ಘೋಷಿಸಿದಂತೆ ಮುಂದಿನ ದಿನಗಳಲ್ಲಿ 4,266 ಅಂಗನವಾಡಿಗಳನ್ನು ನಿರ್ಮಿಸಲಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್‌ ಅರ್ಷದ್‌, ಸಂಸದ ಲೆಹರ್‌ ಸಿಂಗ್‌ ಸಿರೋಯಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ ಎನ್‌.ಮಂಜುಳಾ, ನಿರ್ದೇಶಕಿ ಡಾ ಕೆ.ಎನ್‌.ಅನುರಾಧಾ ಉಪಸ್ಥಿತರಿದ್ದರು.

ಅದೇ ರೀತಿ ಈ ಬಾರಿಯ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ತನ್ನ ಅಪ್ಪನ ಪ್ರಾಣ ಉಳಿಸಿದ ಸಿದ್ದಾಪುರ ತಾಲೂಕಿನ ಕಾನಸೂರಿನ ಕೌಸಲ್ಯ ವೆಂಕಟರಮಣ ಹೆಗಡೆ ಎಂಬ ಬಾಲಕಿಗೆ ಸಮಾಜ ಕಲ್ಯಾಣ ಇಲಾಖೆ ಘೋಷಿಸಿದೆ.

ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದ ತನ್ನ ತಂದೆಯನ್ನು ಬದುಕಿಸಲು ಕೌಸಲ್ಯ ಸುಮಾರು ಎರಡು ಕಿಲೋಮೀಟರ್ ದೂರ ಓಡಿ ಹೋಗಿದ್ದಾಳೆ. ಜನರನ್ನು ಘಟನಾ ಸ್ಥಳಕ್ಕೆ ಕರೆತಂದು ತಂದೆಯ ಪ್ರಾಣ ಉಳಿಸಿದ್ದಾಳೆ. ಬಾಲಕಿಯ ಸಮಯ ಪ್ರಜ್ಞೆಯನ್ನು ಇದೀಗ ಸರ್ಕಾರ ಗುರುತಿಸಿದೆ. ಪ್ರತಿ ವರ್ಷ ನವೆಂಬರ್ 14ರಂದು ಸಾಹಸಮಯ ಪ್ರದರ್ಶನ ತೋರಿಸಿರುವ ಮಕ್ಕಳಿಗೆ ನೀಡುವ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಈ ಬಾರಿ ಬಾಲಕಿ ಕೌಸಲ್ಯಗೆ ನೀಡಲಾಗಿದೆ.

ಕೌಸಲ್ಯ ವೆಂಕಟರಮಣ ಹೆಗಡೆ ಕಾನಸೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಾಳೆ. ಸಣ್ಣ ವಯಸ್ಸಿನಲ್ಲಿಯೇ ವಿಶೇಷ ಸಾಹಸ ಮನೋಭಾವ ಪ್ರದರ್ಶಿಸಿ ಶೌರ್ಯ ಪ್ರಶಸ್ತಿ ಪಡೆದುಕೊಂಡ ಬಾಲಕಿಯ ಸಾಧನೆಗೆ ಕಾನಸೂರಿನ ಜನರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....