Sunday, December 14, 2025
Sunday, December 14, 2025

ಹೊನ್ನಾಳಿ ಚಂದ್ರು ಸಾವಿನ ಪ್ರಕರಣ‌ ಇನ್ನಷ್ಟು ಮಾಹಿತಿ

Date:

ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಸಾವು ಪ್ರಕರಣದಲ್ಲಿ, ಮೃತನ ದೇಹದ ಮೇಲೆ ಯಾವುದೇ ಹಲ್ಲೆಯ ಗುರುತುಗಳಿಲ್ಲ ಎಂಬುದು ತಿಳಿದುಬಂದಿದೆ.

ಚಂದ್ರಶೇಖರ್ ದೇಹದ ಮೇಲೆ ಯಾವುದೇ ಹಲ್ಲೆಯ ಕಲೆಗಳಿಲ್ಲ ಎಂಬುದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯಲ್ಲಿ ಉಲ್ಲೇಖವಾಗಿದೆ ಎಂಬ ಮಾಹಿತಿ ಮಾಧ್ಯಮ ಯೊಂದಕ್ಕೆ ಮಾಹಿತಿ ಲಭಿಸಿದೆ.

ರೇಣುಕಾಚಾರ್ಯ ಅವರ ಕುಟುಂಬದವರು, ಚಂದ್ರುಗೆ ಸಾವಿನ ಮುನ್ನ ಹಲ್ಲೆಯಾಗಿತ್ತು ಎಂದು ಆರೋಪಿಸಿದ್ದರು. ಆದರೆ, ಚಂದ್ರಶೇಖರ್ ಕೈಗೆ ಹಗ್ಗ ಕಟ್ಟಿರಲಿಲ್ಲ, ತಲೆಯ ಹಿಂಭಾಗಕ್ಕೂ ಹಲ್ಲೆ ಮಾಡಿರಲಿಲ್ಲ, ಚಂದ್ರು ದೇಹದ ಮೇಲೆ ಯಾವುದೇ ಆಯುಧಗಳ ಕಲೆಗಳಿಲ್ಲ ಎಂಬುದು ಸ್ಪಷ್ಟವಾಗಿದೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರ ಸೂಚನೆಯ ಹಿನ್ನೆಲೆಯಲ್ಲಿ ಅನೇಕ ಆಯಾಮಗಳಲ್ಲಿ ತನಿಖೆ ನಡೆದಿದೆ. ಆತ್ಮಹತ್ಯೆ ಅಥವಾ ಕೊಲೆ 3 ಸಾಧ್ಯತೆಗಳನ್ನು ತನಿಖೆ ಮಾಡಲಾಗುತ್ತಿದೆ. ಚಂದ್ರು ದೇಹದ ಮೇಲೆ‌ ಆಯುಧಗಳಿಂದ ಹಲ್ಲೆ ಮಾಡಿಲ್ಲವಾದರೂ, ಏನಾದರೂ ಇಂಜೆಕ್ಟ್ ಮಾಡಿದ್ದಾರಾ ಅನ್ನೋ ಬಗ್ಗೆಯೂ ಪರೀಕ್ಷೆ ನಡೆದಿದೆ. ಪ್ರಾಥಮಿಕ ವರದಿಯಲ್ಲಿ ಹತ್ಯೆಯ ಯಾವುದೇ ಸುಳಿವು ಸಿಕ್ಕಿಲ್ಲ. ಇನ್ನೊಂದು ವಾರದಲ್ಲಿ ಈ ಕುರಿತು ಪೊಲೀಸ್ ಇಲಾಖೆ ಮಾಹಿತಿ ಹೊರ ಹಾಕಲಿದೆ ಎಂದು ನಿರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...