Saturday, December 13, 2025
Saturday, December 13, 2025

ಹೊನ್ನಾಳಿ ಚಂದ್ರು ಸಾವಿನ ಪ್ರಕರಣ‌ ಇನ್ನಷ್ಟು ಮಾಹಿತಿ

Date:

ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಸಾವು ಪ್ರಕರಣದಲ್ಲಿ, ಮೃತನ ದೇಹದ ಮೇಲೆ ಯಾವುದೇ ಹಲ್ಲೆಯ ಗುರುತುಗಳಿಲ್ಲ ಎಂಬುದು ತಿಳಿದುಬಂದಿದೆ.

ಚಂದ್ರಶೇಖರ್ ದೇಹದ ಮೇಲೆ ಯಾವುದೇ ಹಲ್ಲೆಯ ಕಲೆಗಳಿಲ್ಲ ಎಂಬುದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯಲ್ಲಿ ಉಲ್ಲೇಖವಾಗಿದೆ ಎಂಬ ಮಾಹಿತಿ ಮಾಧ್ಯಮ ಯೊಂದಕ್ಕೆ ಮಾಹಿತಿ ಲಭಿಸಿದೆ.

ರೇಣುಕಾಚಾರ್ಯ ಅವರ ಕುಟುಂಬದವರು, ಚಂದ್ರುಗೆ ಸಾವಿನ ಮುನ್ನ ಹಲ್ಲೆಯಾಗಿತ್ತು ಎಂದು ಆರೋಪಿಸಿದ್ದರು. ಆದರೆ, ಚಂದ್ರಶೇಖರ್ ಕೈಗೆ ಹಗ್ಗ ಕಟ್ಟಿರಲಿಲ್ಲ, ತಲೆಯ ಹಿಂಭಾಗಕ್ಕೂ ಹಲ್ಲೆ ಮಾಡಿರಲಿಲ್ಲ, ಚಂದ್ರು ದೇಹದ ಮೇಲೆ ಯಾವುದೇ ಆಯುಧಗಳ ಕಲೆಗಳಿಲ್ಲ ಎಂಬುದು ಸ್ಪಷ್ಟವಾಗಿದೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರ ಸೂಚನೆಯ ಹಿನ್ನೆಲೆಯಲ್ಲಿ ಅನೇಕ ಆಯಾಮಗಳಲ್ಲಿ ತನಿಖೆ ನಡೆದಿದೆ. ಆತ್ಮಹತ್ಯೆ ಅಥವಾ ಕೊಲೆ 3 ಸಾಧ್ಯತೆಗಳನ್ನು ತನಿಖೆ ಮಾಡಲಾಗುತ್ತಿದೆ. ಚಂದ್ರು ದೇಹದ ಮೇಲೆ‌ ಆಯುಧಗಳಿಂದ ಹಲ್ಲೆ ಮಾಡಿಲ್ಲವಾದರೂ, ಏನಾದರೂ ಇಂಜೆಕ್ಟ್ ಮಾಡಿದ್ದಾರಾ ಅನ್ನೋ ಬಗ್ಗೆಯೂ ಪರೀಕ್ಷೆ ನಡೆದಿದೆ. ಪ್ರಾಥಮಿಕ ವರದಿಯಲ್ಲಿ ಹತ್ಯೆಯ ಯಾವುದೇ ಸುಳಿವು ಸಿಕ್ಕಿಲ್ಲ. ಇನ್ನೊಂದು ವಾರದಲ್ಲಿ ಈ ಕುರಿತು ಪೊಲೀಸ್ ಇಲಾಖೆ ಮಾಹಿತಿ ಹೊರ ಹಾಕಲಿದೆ ಎಂದು ನಿರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Visvesvaraya Technological University ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಾಗಾರ

Visvesvaraya Technological University ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ "ಜ್ಞಾನ...

B.Y. Raghavendra ಶಿವಮೊಗ್ಗದಲ್ಲಿ ESIC ಉಪ-ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಬಿ.ವೈ.ರಾಘವೇಂದ್ರ ಮನವಿ

B.Y. Raghavendra ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾದ ಸನ್ಮಾನ್ಯ ಡಾ....

CM Siddharamaih ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಭೆ

CM Siddharamaih ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ...