Sunday, August 23, 2026
Sunday, August 23, 2026

ಹೊನ್ನಾಳಿ ಚಂದ್ರು ಸಾವಿನ ಪ್ರಕರಣ‌ ಇನ್ನಷ್ಟು ಮಾಹಿತಿ

Date:

ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಸಾವು ಪ್ರಕರಣದಲ್ಲಿ, ಮೃತನ ದೇಹದ ಮೇಲೆ ಯಾವುದೇ ಹಲ್ಲೆಯ ಗುರುತುಗಳಿಲ್ಲ ಎಂಬುದು ತಿಳಿದುಬಂದಿದೆ.

ಚಂದ್ರಶೇಖರ್ ದೇಹದ ಮೇಲೆ ಯಾವುದೇ ಹಲ್ಲೆಯ ಕಲೆಗಳಿಲ್ಲ ಎಂಬುದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯಲ್ಲಿ ಉಲ್ಲೇಖವಾಗಿದೆ ಎಂಬ ಮಾಹಿತಿ ಮಾಧ್ಯಮ ಯೊಂದಕ್ಕೆ ಮಾಹಿತಿ ಲಭಿಸಿದೆ.

ರೇಣುಕಾಚಾರ್ಯ ಅವರ ಕುಟುಂಬದವರು, ಚಂದ್ರುಗೆ ಸಾವಿನ ಮುನ್ನ ಹಲ್ಲೆಯಾಗಿತ್ತು ಎಂದು ಆರೋಪಿಸಿದ್ದರು. ಆದರೆ, ಚಂದ್ರಶೇಖರ್ ಕೈಗೆ ಹಗ್ಗ ಕಟ್ಟಿರಲಿಲ್ಲ, ತಲೆಯ ಹಿಂಭಾಗಕ್ಕೂ ಹಲ್ಲೆ ಮಾಡಿರಲಿಲ್ಲ, ಚಂದ್ರು ದೇಹದ ಮೇಲೆ ಯಾವುದೇ ಆಯುಧಗಳ ಕಲೆಗಳಿಲ್ಲ ಎಂಬುದು ಸ್ಪಷ್ಟವಾಗಿದೆ.

ಮುಖ್ಯಮಂತ್ರಿ ಬೊಮ್ಮಾಯಿ ಅವರ ಸೂಚನೆಯ ಹಿನ್ನೆಲೆಯಲ್ಲಿ ಅನೇಕ ಆಯಾಮಗಳಲ್ಲಿ ತನಿಖೆ ನಡೆದಿದೆ. ಆತ್ಮಹತ್ಯೆ ಅಥವಾ ಕೊಲೆ 3 ಸಾಧ್ಯತೆಗಳನ್ನು ತನಿಖೆ ಮಾಡಲಾಗುತ್ತಿದೆ. ಚಂದ್ರು ದೇಹದ ಮೇಲೆ‌ ಆಯುಧಗಳಿಂದ ಹಲ್ಲೆ ಮಾಡಿಲ್ಲವಾದರೂ, ಏನಾದರೂ ಇಂಜೆಕ್ಟ್ ಮಾಡಿದ್ದಾರಾ ಅನ್ನೋ ಬಗ್ಗೆಯೂ ಪರೀಕ್ಷೆ ನಡೆದಿದೆ. ಪ್ರಾಥಮಿಕ ವರದಿಯಲ್ಲಿ ಹತ್ಯೆಯ ಯಾವುದೇ ಸುಳಿವು ಸಿಕ್ಕಿಲ್ಲ. ಇನ್ನೊಂದು ವಾರದಲ್ಲಿ ಈ ಕುರಿತು ಪೊಲೀಸ್ ಇಲಾಖೆ ಮಾಹಿತಿ ಹೊರ ಹಾಕಲಿದೆ ಎಂದು ನಿರೀಕ್ಷಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...