Saturday, December 13, 2025
Saturday, December 13, 2025

ಪ್ರಾಥಮಿಕ ಶಾಲೆ ಪದವೀಧರ ಶಿಕ್ಷಕರಿಗೆ ಶುಭ ಸುದ್ದಿ

Date:

ರಾಜ್ಯದ ಪ್ರಾಥಮಿಕ ಶಾಲೆಯ ಪದವೀಧರ ಶಿಕ್ಷಕರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಿಹಿಸುದ್ದಿ ನೀಡಿದ್ದು, ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರನ್ನು 6 ರಿಂದ 8 ನೇ ತರಗತಿಗೆ ನಿಯುಕ್ತಿಗೊಳಿಸಲು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಪ್ರಸ್ತುತ ಪ್ರಗತಿಯಲ್ಲಿರುವ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರನ್ನು 6-8 ನೇ ತರಗತಿಗೆ ನಿಯುಕ್ತಿಗೊಳಿಸಲು ಪರಿಶೀಲನೆ ನಡೆಸಿ ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಸಚಿವ ಬಿ.ಸಿ.ನಾಗೇಶ್ ಸೂಚಿಸಿದ್ದಾರೆ.

6 ರಿಂದ 8 ನೇ ತರಗತಿಗಳಲ್ಲಿ ಖಾಲಿ ಇರುವ ಪದವೀಧರ ಶಿಕ್ಷಕ ಹುದ್ದೆಗಳ ಪೈಕಿ ಶೇ. 40 ರಷ್ಟು ಸ್ಥಾನಗಳಿಗೆ ಹಾಲಿ ಪ್ರಾಥಮಿಕ ಶಾಲೆಗಳಲ್ಲಿ (1 ರಿಂದ 5) ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರನ್ನು ಸೇವಾ ಜೇಷ್ಠತೆ ಆಧಾರದಲ್ಲಿ ಪರಿಶೀಲಿಸಿ ಬಡ್ತಿ ನೀಡುವ ಸಂಬಂಧ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

G. Parameshwara ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ: ಸಚಿವ ಜಿ.ಪರಮೇಶ್ವರ

G. Parameshwara ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ...

Adichunchanagiri Mutt ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದಲ್ಲಿ ರಾಜ್ಯ ಮಟ್ಟದ ಉಚಿತ ಅರ್ಚಕ ತರಬೇತಿ ಶಿಬಿರ ಆಯೋಜನೆ

Adichunchanagiri Mutt ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿ ಮಹಾ...