Monday, December 15, 2025
Monday, December 15, 2025

ಅಪಘಾತದಲ್ಲಿ ಬದುಕುಳಿದ ವ್ಯಕ್ತಿಗೆ ಪರಿಹಾರ ನಿರಾಕರಿಸಲಾಗದು- ಸುಪ್ರೀಂ ಕೋರ್ಟ್

Date:

ಅಪಘಾತ ಪ್ರಕರಣಗಳಲ್ಲಿ ಗಂಭೀರ ಗಾಯಗೊಂಡು ಬದುಕುಳಿದ ವ್ಯಕ್ತಿಗೆ ಭವಿಷ್ಯದಲ್ಲಿ ಎದುರಾಗುವ ಶಾಶ್ವತ ಅಂಗವೈಕಲ್ಯದ ಸಾಧ್ಯತೆಗೆ ಪರಿಹಾರ ಕೊಡುವುದನ್ನು ನಿರಾಕರಿಸಲಾಗುವುದು ಎಂಬುದನ್ನು ಸಮರ್ಥಿಸಲಾಗದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ನ್ಯಾಯಾಲಯದಿಂದ ಪರಿಹಾರ ನಿರ್ಧರಿಸುವ ಪ್ರಕ್ರಿಯೆಯು ಮೂಲಭೂತವಾಗಿ ತುಂಬಾ ಕಠಿಣ ಸವಾಲು ಮತ್ತು ಇದು ಪರಿಪೂರ್ಣ ವಿಜ್ಞಾನವಾಗಲು ಸಾಧ್ಯವಿಲ್ಲ. ಗಾಯ ಮತ್ತು ಅಂಗವೈಕಲ್ಯಕ್ಕೆ ಪರಿಪೂರ್ಣವಾದ ಪರಿಹಾರ ನಿಗದಿಪಡಿಸುವುದು ಅಷ್ಟು ಸುಲಭವಲ್ಲ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೆ.ಬಿ. ಪಾರ್ದೀವಾಲಾ ಅವರಿದ್ದ ಪೀಠವು, ಕರ್ನಾಟಕದಲ್ಲಿ 2012ರ ಜುಲೈನಲ್ಲಿ ‌ರಸ್ತೆ ಅಪಘಾತದಲ್ಲಿ ಶೇ 45 ಶಾಶ್ವತ ಅಂಗವೈಕಲ್ಯಕ್ಕೆ ಒಳಗಾದ ವ್ಯಕ್ತಿಗೆ ನೀಡಬೇಕಾದ ಪರಿಹಾರ ಮೊತ್ತವನ್ನು ₹21,78,600ಕ್ಕೆ ಹೆಚ್ಚಿಸಿದೆ.

ಬೆಳಗಾವಿಯ ಮೋಟಾರು ಅಪಘಾತಗಳ ಪರಿಹಾರ ನ್ಯಾಯಮಂಡಳಿ ನೀಡಿದ್ದ ಪರಿಹಾರವನ್ನು ₹3,13,800ನಿಂದ ₹ 9,26,800ಕ್ಕೆ ಹೆಚ್ಚಿಸಿ 2018ರ ಏಪ್ರಿಲ್‌ನಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಿದ್ರಾಮ್ ಎಂಬುವವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಆಲಿಸಿದ ಸುಪ್ರೀಂ ಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ.

ಹೈಕೋರ್ಟ್ ತೀರ್ಪು ಪ್ರಶ್ನಿಸಿ, ಪರಿಹಾರ ಮೊತ್ತ ಹೆಚ್ಚಿಸುವಂತೆಯೂ ಮೇಲ್ಮನವಿಯಲ್ಲಿ ಅರ್ಜಿದಾರರು ಕೋರಿದ್ದರು.
ಅರ್ಜಿಯನ್ನು ಸಲ್ಲಿಸಿದ ದಿನದಿಂದ ಪಾವತಿಯ ಅನುಷ್ಠಾನದ ದಿನಾಂಕದವರೆಗೆ ವಾರ್ಷಿಕ ಶೇ 6ರ ದರದಲ್ಲಿ ಬಡ್ಡಿಯೊಂದಿಗೆ ₹ 6,13,000 ಪರಿಹಾರವನ್ನು ನ್ಯಾಯಮಂಡಳಿಯು ನೀಡಿರುವುದನ್ನು ಪೀಠವು ಗಮನಿಸಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...