Sunday, June 22, 2025
Sunday, June 22, 2025

ಅಪಘಾತದಲ್ಲಿ ಬದುಕುಳಿದ ವ್ಯಕ್ತಿಗೆ ಪರಿಹಾರ ನಿರಾಕರಿಸಲಾಗದು- ಸುಪ್ರೀಂ ಕೋರ್ಟ್

Date:

ಅಪಘಾತ ಪ್ರಕರಣಗಳಲ್ಲಿ ಗಂಭೀರ ಗಾಯಗೊಂಡು ಬದುಕುಳಿದ ವ್ಯಕ್ತಿಗೆ ಭವಿಷ್ಯದಲ್ಲಿ ಎದುರಾಗುವ ಶಾಶ್ವತ ಅಂಗವೈಕಲ್ಯದ ಸಾಧ್ಯತೆಗೆ ಪರಿಹಾರ ಕೊಡುವುದನ್ನು ನಿರಾಕರಿಸಲಾಗುವುದು ಎಂಬುದನ್ನು ಸಮರ್ಥಿಸಲಾಗದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ನ್ಯಾಯಾಲಯದಿಂದ ಪರಿಹಾರ ನಿರ್ಧರಿಸುವ ಪ್ರಕ್ರಿಯೆಯು ಮೂಲಭೂತವಾಗಿ ತುಂಬಾ ಕಠಿಣ ಸವಾಲು ಮತ್ತು ಇದು ಪರಿಪೂರ್ಣ ವಿಜ್ಞಾನವಾಗಲು ಸಾಧ್ಯವಿಲ್ಲ. ಗಾಯ ಮತ್ತು ಅಂಗವೈಕಲ್ಯಕ್ಕೆ ಪರಿಪೂರ್ಣವಾದ ಪರಿಹಾರ ನಿಗದಿಪಡಿಸುವುದು ಅಷ್ಟು ಸುಲಭವಲ್ಲ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೆ.ಬಿ. ಪಾರ್ದೀವಾಲಾ ಅವರಿದ್ದ ಪೀಠವು, ಕರ್ನಾಟಕದಲ್ಲಿ 2012ರ ಜುಲೈನಲ್ಲಿ ‌ರಸ್ತೆ ಅಪಘಾತದಲ್ಲಿ ಶೇ 45 ಶಾಶ್ವತ ಅಂಗವೈಕಲ್ಯಕ್ಕೆ ಒಳಗಾದ ವ್ಯಕ್ತಿಗೆ ನೀಡಬೇಕಾದ ಪರಿಹಾರ ಮೊತ್ತವನ್ನು ₹21,78,600ಕ್ಕೆ ಹೆಚ್ಚಿಸಿದೆ.

ಬೆಳಗಾವಿಯ ಮೋಟಾರು ಅಪಘಾತಗಳ ಪರಿಹಾರ ನ್ಯಾಯಮಂಡಳಿ ನೀಡಿದ್ದ ಪರಿಹಾರವನ್ನು ₹3,13,800ನಿಂದ ₹ 9,26,800ಕ್ಕೆ ಹೆಚ್ಚಿಸಿ 2018ರ ಏಪ್ರಿಲ್‌ನಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಿದ್ರಾಮ್ ಎಂಬುವವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಆಲಿಸಿದ ಸುಪ್ರೀಂ ಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ.

ಹೈಕೋರ್ಟ್ ತೀರ್ಪು ಪ್ರಶ್ನಿಸಿ, ಪರಿಹಾರ ಮೊತ್ತ ಹೆಚ್ಚಿಸುವಂತೆಯೂ ಮೇಲ್ಮನವಿಯಲ್ಲಿ ಅರ್ಜಿದಾರರು ಕೋರಿದ್ದರು.
ಅರ್ಜಿಯನ್ನು ಸಲ್ಲಿಸಿದ ದಿನದಿಂದ ಪಾವತಿಯ ಅನುಷ್ಠಾನದ ದಿನಾಂಕದವರೆಗೆ ವಾರ್ಷಿಕ ಶೇ 6ರ ದರದಲ್ಲಿ ಬಡ್ಡಿಯೊಂದಿಗೆ ₹ 6,13,000 ಪರಿಹಾರವನ್ನು ನ್ಯಾಯಮಂಡಳಿಯು ನೀಡಿರುವುದನ್ನು ಪೀಠವು ಗಮನಿಸಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...