Thursday, August 13, 2026
Thursday, August 13, 2026

ಕೋಣಂದೂರು ಆಸ್ಪತ್ರೆ ಉನ್ನತೀಕರಿಸಿದ ಸೀಎಂಗೆ ಜ್ಞಾನೇಂದ್ರ ಕೃತಜ್ಞತೆ

Date:

ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ
ರಾಜ್ಯ ಸಚಿವ ಸಂಪುಟದಲ್ಲಿ, ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀ ಕರಿಸಲು ಅಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ.

ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರು ಉಪಸ್ಥಿತರಿದ್ದ ಸಂಪುಟದ ಸಭೆ ಈ ನಿರ್ಧಾರ ಕೈಗೊಂಡಿದ್ದು ಬಹಳ ದಿನಗಳಿಂದ ಬೇಡಿಕೆಯಾಗಿಯೇ ಉಳಿದಿದ್ದ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದೆ.

2022-23ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದಲ್ಲಿ ಹೆಚ್ಚಿನ ಕಾರ್ಯ ಒತ್ತಡವಿರುವ ಒಟ್ಟು 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 1000 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಉನ್ನತೀಕರಿಸುವ ಯೋಜನೆಯನ್ನು ಘೋಷಿಸಿದ್ದರು.

ಈ ಯೋಜನೆಯ ಲಾಭ ತಾಲೂಕಿನ ಜನತೆಗೆ ಪಡೆದುಕೊಳ್ಳಲು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಅವರು ವಿಶೇಷ ಮುತುವರ್ಜಿ ವಹಿಸಿದ್ದರು.

ತಾಲೂಕಿನ ಜನತೆಯ ಬಹಳ ದಿನಗಳ ಬೇಡಿಕೆಯನ್ನು ಈಡೇರಿಸಿದ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಾಯಿ ಅವರಿಗೆ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರರವರು ಕೃತಜ್ಞತೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...