Monday, December 15, 2025
Monday, December 15, 2025

ಎಲೆಚುಕ್ಕೆ ರೋಗ ಬಾಧಿತ ಅಡಿಕೆ ತೋಟಗಳಿಗೆ ಪರಿಣಿತರ ಭೇಟಿ

Date:

ಮಲೆನಾಡಿನ ಆರ್ಥಿಕತೆಗೆ ಬೆನ್ನೆಲುಬು ಆಗಿದ್ದಂತಹ ಅಡಿಕೆ ಬೆಳೆಗೆ ಈಗ ಹೊಸ ರೋಗ ಕಾಟದ ಕಾಟ ಹೆಚ್ಚಾಗಿದೆ.

ಹಳದಿ ಎಲೆ, ಕೊಳೆ, ಎಲೆಚುಕ್ಕಿ, ಹಿಡಿಮುಂಡಿಗೆ, ಹಿಂಗಾರ ಒಣಗುವ ರೋಗಗಳಿಂದ ಕಂಗಾಲಾಗಿರುವ ರೈತರಿಗೆ ಕಾಂಡ ಕೊರಕ ಹುಳು ಬಾಧೆ ಇನ್ನಷ್ಟು ಆತಂಕಕ್ಕೆ ಸಿಲುಕಿಸಿದೆ.

ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನೇಕ ತೋಟಗಳಲ್ಲಿ ಈ ರೋಗ ಕಾಣಿಸಿಕೊಂಡಿದೆ. 3ರಿಂದ 4 ವರ್ಷಗಳ ಗಿಡಗಳು ಹುಳುಗಳ ಬಾಧೆಗೆ
ಒಣಗಿ ಬುಡ
ಮೇಲಾಗುತ್ತಿವೆ. ರೋಗ ತಗುಲಿರುವ ಸಸಿಗಳಲ್ಲಿ ಅಂಟಿನ ಅಂಶಗಳ ಮೂಲಕ ಗಮ್‌ ರೀತಿ ಕಾಣಿಸಿಕೊಳ್ಳುತ್ತದೆ. ಅಂಟಿನ ಅಂಶದ ಕೆಳಗೆ ರಂಧ್ರಗಳು ನಿರ್ಮಾಣವಾಗಿರುವುದನ್ನು ರೈತರು ಗುರುತಿಸಬೇಕು.

ಸ್ಥಳಕ್ಕೆ ತೋಟಗಾರಿಕೆ
ಇಲಾಖೆ, ಕೃಷಿ ಮತ್ತು ಸೀಬಿನಕೆರೆ ತೋಟಗಾರಿಕಾ ಸಂಶೋಧನಾ
ಕೇಂದ್ರದ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕವಾಗಿ ಇದು ರಂಧ್ರ ಕೊರೆಯುವ ಹುಳು ಎಂದು ಗುರುತಿಸಲಾಗಿದೆ. ಸದ್ಯ ನಿಯಂತ್ರಣಕ್ಕೆ ಕ್ಲೋರೊಫಿರಫಸ್‌ 20ಇಸಿ – 3ಮಿ.ಲೀ ಪ್ರತಿ ಲೀಟರ್‌ ನೀರಿಗೆ ಬೆರೆಸಿ
ಕಾಂಡಕ್ಕೆ ಉಪಚಾರ ಮಾಡುವ ಮೂಲಕ ನಿಯಂತ್ರಿಸಬಹುದು.
15 ದಿನಗಳ ನಂತರ ಇದೆ
ದ್ರಾವಣದಲ್ಲಿ ಬಟ್ಟೆಯನ್ನು ನೆನೆಸಿ ಕೀಟದಿಂದ ಭಾದೆಗೊಳಗಾದ ಅಡಿಕೆ ಕಾಂಡದ ಸುತ್ತಲು
ಕಟ್ಟಬೇಕು. ಅಥವಾ ಹನಿಯಾಗಿರುವ ಕಾಂಡಗಳಿಗೆ ಔಷಧಿಯನ್ನು ಬಳಿಯಬೇಕು ಎಂದು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...