Friday, March 20, 2026
Friday, March 20, 2026

ಎಲೆಚುಕ್ಕೆ ರೋಗ ಬಾಧಿತ ಅಡಿಕೆ ತೋಟಗಳಿಗೆ ಪರಿಣಿತರ ಭೇಟಿ

Date:

ಮಲೆನಾಡಿನ ಆರ್ಥಿಕತೆಗೆ ಬೆನ್ನೆಲುಬು ಆಗಿದ್ದಂತಹ ಅಡಿಕೆ ಬೆಳೆಗೆ ಈಗ ಹೊಸ ರೋಗ ಕಾಟದ ಕಾಟ ಹೆಚ್ಚಾಗಿದೆ.

ಹಳದಿ ಎಲೆ, ಕೊಳೆ, ಎಲೆಚುಕ್ಕಿ, ಹಿಡಿಮುಂಡಿಗೆ, ಹಿಂಗಾರ ಒಣಗುವ ರೋಗಗಳಿಂದ ಕಂಗಾಲಾಗಿರುವ ರೈತರಿಗೆ ಕಾಂಡ ಕೊರಕ ಹುಳು ಬಾಧೆ ಇನ್ನಷ್ಟು ಆತಂಕಕ್ಕೆ ಸಿಲುಕಿಸಿದೆ.

ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನೇಕ ತೋಟಗಳಲ್ಲಿ ಈ ರೋಗ ಕಾಣಿಸಿಕೊಂಡಿದೆ. 3ರಿಂದ 4 ವರ್ಷಗಳ ಗಿಡಗಳು ಹುಳುಗಳ ಬಾಧೆಗೆ
ಒಣಗಿ ಬುಡ
ಮೇಲಾಗುತ್ತಿವೆ. ರೋಗ ತಗುಲಿರುವ ಸಸಿಗಳಲ್ಲಿ ಅಂಟಿನ ಅಂಶಗಳ ಮೂಲಕ ಗಮ್‌ ರೀತಿ ಕಾಣಿಸಿಕೊಳ್ಳುತ್ತದೆ. ಅಂಟಿನ ಅಂಶದ ಕೆಳಗೆ ರಂಧ್ರಗಳು ನಿರ್ಮಾಣವಾಗಿರುವುದನ್ನು ರೈತರು ಗುರುತಿಸಬೇಕು.

ಸ್ಥಳಕ್ಕೆ ತೋಟಗಾರಿಕೆ
ಇಲಾಖೆ, ಕೃಷಿ ಮತ್ತು ಸೀಬಿನಕೆರೆ ತೋಟಗಾರಿಕಾ ಸಂಶೋಧನಾ
ಕೇಂದ್ರದ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕವಾಗಿ ಇದು ರಂಧ್ರ ಕೊರೆಯುವ ಹುಳು ಎಂದು ಗುರುತಿಸಲಾಗಿದೆ. ಸದ್ಯ ನಿಯಂತ್ರಣಕ್ಕೆ ಕ್ಲೋರೊಫಿರಫಸ್‌ 20ಇಸಿ – 3ಮಿ.ಲೀ ಪ್ರತಿ ಲೀಟರ್‌ ನೀರಿಗೆ ಬೆರೆಸಿ
ಕಾಂಡಕ್ಕೆ ಉಪಚಾರ ಮಾಡುವ ಮೂಲಕ ನಿಯಂತ್ರಿಸಬಹುದು.
15 ದಿನಗಳ ನಂತರ ಇದೆ
ದ್ರಾವಣದಲ್ಲಿ ಬಟ್ಟೆಯನ್ನು ನೆನೆಸಿ ಕೀಟದಿಂದ ಭಾದೆಗೊಳಗಾದ ಅಡಿಕೆ ಕಾಂಡದ ಸುತ್ತಲು
ಕಟ್ಟಬೇಕು. ಅಥವಾ ಹನಿಯಾಗಿರುವ ಕಾಂಡಗಳಿಗೆ ಔಷಧಿಯನ್ನು ಬಳಿಯಬೇಕು ಎಂದು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...