Monday, April 28, 2025
Monday, April 28, 2025

ಮತದರಾರ ಪಟ್ಟಿ ಪರಿಷ್ಕರಣೆ ಹಗರಣ ಇಕ್ಕಟ್ಟಿಗೆ ಸಿಕ್ಕ ಸರ್ಕಾರ

Date:

ಮತದಾರರ ಗುರುತಿನ ಚೀಟಿ ಪರಿಷ್ಕರಣೆ ನೆಪದಲ್ಲಿ ವೈಯಕ್ತಿಕ ವಿವರಗಳನ್ನು ಕಲೆ ಹಾಕಲಾಗಿದೆ ಎಂಬ ಪ್ರಕರಣ ಮತ್ತೊಂದು ತಿರುವು ಪಡೆದಿದೆ.

ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರಿಗೆ ಸೇರಿದ ಚೆಕ್ ಮತ್ತು ಎನ್ವಲಪ್ ಕವರ್ ಪತ್ತೆಯಾಗಿರುವುದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ.

ಮಲ್ಲೇಶ್ವರಂನಲ್ಲಿರುವ ಚಿಲುಮೆ ಸಂಸ್ಥೆಯಲ್ಲಿ ಬೆಂಗಳೂರು ಪ್ರತಿನಿಧಿಸುವ ಪ್ರಭಾವಿ ಸಚಿವರಿಗೆ ಸೇರಿದ ಖಾಲಿ ಚೆಕ್‌ಗಳು, ಎನ್ವಲಪ್ ಕವರ್, ಕೆಲವು ಮತದಾರರ ಗುರುತಿನಚೀಟಿ, ಲೆಟರ್ ಹೆಡ್‌ಗಳು ಪತ್ತೆಯಾಗಿವೆ.

ಅಲ್ಲದೆ, ಕಚೇರಿಯಲ್ಲಿ ನೋಟುಗಳನ್ನು ಎಣಿಕೆ ಮೆಷಿನ್ ಕೂಡ ಪತ್ತೆಯಾಗಿರುವುದು ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ.

ಸಂಸ್ಥೆಯಲ್ಲಿ ಚುನಾವಣಾ ಸಮನ್ವಯ ಅಧಿ ಕಾರಿ ಎಂದು ಕೆಲವರು ಕರ್ತವ್ಯ ನಿರ್ವಹಿಸು ತ್ತಿದ್ದು, 50 ಗುರುತಿನ ಚೀಟಿ, ಬಿಲ್‌ಗಳು, ಸಿಸಿಟಿವಿ, ಕಂಪ್ಯೂಟರ್, ಲ್ಯಾಪ್‌ಟಾಪ್, ಹಾರ್ಡ್ ಡಿಸ್ಕ್, ಪೆನ್‌ಡ್ರೈವ್, ಸಿಡಿ, ಡಿವಿಆರ್ ಮತ್ತಿತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಚಿಲುಮೆ ಸಂಸ್ಥೆಯಲ್ಲಿ ಯಾವ ಕಾರಣಕ್ಕಾಗಿ ಇವೆಲ್ಲವನ್ನೂ ಇಟ್ಟುಕೊಳ್ಳಲಾಯಿತು ಎಂಬ ಪ್ರಶ್ನೆ ಎದುರಾಗಿದೆ.
ಚಿಲುಮೆ ಸಂಸ್ಥೆಯ 20ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಗೌಪ್ಯ ಮಾಹಿತಿಯನ್ನು ನೀಡುವುದಾಗಿ ರಾಜಕಾರಣಿ ಗಳಿಗೆ ಗಾಳ ಹಾಕಿರುವುದು ಬೆಳಕಿಗೆ ಬಂದಿದೆ.

ಈ ಸಂಸ್ಥೆಯ ರಾಜಕಾರಣಿಗಳಿಗೆ ನಿರಂತರವಾಗಿ ಇ-ಮೇಲ್ ಮಾಡಿರುವುದು ಬಹಿರಂಗವಾಗಿದೆ. ಬೆಂಗಳೂರಿನ ‘ಚಿಲುಮೆ’ ಪ್ರಕರಣದ ಬಗ್ಗೆ ಉಚ್ಚ ನ್ಯಾಾಂಲಯದ ನ್ಯಾಯಮೂರ್ತಿ ಅವರಿಂದ ತನಿಖೆ ನಡೆಸಬೇಕು ಎಂಬ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬೇಡಿಕೆಯನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಬಸವರಾಜ ಬೊವ್ಮಾಯಿ, ‘ನಮ್ಮ ಪೊಲೀಸರೇ ತನಿಖೆ ಮಾಡುತ್ತಿದ್ದಾರೆ. ಅವರಿಂದಲೇ ತನಿಖೆ ನಡೆಯಲಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chanakya Chess School ಮೇ 2 ರಿಂದ ಮುಕ್ತ ಚೆಸ್ ತರಬೇತಿ ಶಿಬಿರ

Chanakya Chess School ಚಾಣಕ್ಯ ಚೆಸ್ ಸ್ಕೂಲ್ ವತಿಯಿಂದ ಶಿವಮೊಗ್ಗ ನಗರದ...