Friday, December 5, 2025
Friday, December 5, 2025

ಜನರ ಮನೆಬಾಗಿಲಿಗೆ ಸರ್ಕಾರಿ ಸೇವೆ ತಲುಪಿಸಲು ಜನತಾದರ್ಶನ ಪುನರಾರಂಭ

Date:

ಸರ್ಕಾರದ ಎಲ್ಲ ಸೇವೆಗಳನ್ನು ಕ್ಷೇತ್ರದ ಜನರ ಮನೆ ಬಾಗಿಲಿಗೆ ಒದಗಿಸುವ ದೃಷ್ಟಿಯಿಂದ ಜನತಾದರ್ಶನ ಕಾರ್ಯಕ್ರಮವನ್ನು ಪುನರಾರಂಭಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಜನತಾದರ್ಶನದಲ್ಲಿ ಮಾತನಾಡಿದ ಅವರು, ತಾವು ಶಾಸಕರಾಗಿ ಆಯ್ಕೆಯಾದ ದಿನದಿಂದಲೂ ಜನತಾದರ್ಶನ ಕಾರ್ಯಕ್ರಮ ನಡೆಸುತ್ತಿದ್ದು, ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದಾಗಿ ಕಾರ್ಯಕ್ರಮ ತಡೆ ಹಿಡಿಯಲಾಗಿತ್ತು. ಈಗ ಮತ್ತೆ ಆರಂಭಿಸಲಾಗಿದೆ ಎಂದು ತಿಳಿಸಿದರು.

ಜನತಾದರ್ಶನದಲ್ಲಿ ಜಿಲ್ಲಾಕಾರಿಗಳು, ತಹಸೀಲ್ದಾರ್, ಜಿಪಂ ಸಿಇಒ ಸೇರಿದಂತೆ ಸಂಬಂಧಿಸಿದ ಹಿರಿಯ ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರಿಂದ ಬಂದ ಅರ್ಜಿಗಳನ್ನು ಸ್ವೀಕರಿಸಿ, ಸಂಬಂಧಿಸಿದ ಇಲಾಖೆಯ ಹಿರಿಯ ಅಕಾರಿಗಳಿಗೆ ರವಾನಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸಾರ್ವಜನಿಕರಿಂದ ಬರುವ ಸಮಸ್ಯೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿಯೇ ಪರಿಹರಿಸಲು ಕ್ರಮ ವಹಿಸಲಾಗುತ್ತದೆ. ಉಳಿದವುಗಳನ್ನು ಸಕಾಲ ಯೋಜನೆ ಮಾದರಿಯಲ್ಲಿ ಕೇವಲ ಒಂದು ತಿಂಗಳಲ್ಲಿ ಪರಿಹರಿಸಲು ಸಂಬಂಧಿಸಿದ ಹಿರಿಯ ಅಧಿಕಾರಿಗಳು ಕ್ರಮ ವಹಿಸಬೇಕು. ಒಂದು ವೇಳೆ ಕಾನೂನು ತೊಡುಕು ಇರುವ ಸಮಸ್ಯೆಗಳ ಕುರಿತು ಅರ್ಜಿದಾರರಿಗೆ ಸಕಾರಣವನ್ನು ಒಂದು ತಿಂಗಳಿನಲ್ಲಿ ನೀಡಲು ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಜನಸ್ನೇಹಿ ಆಡಳಿತ ನೀಡುವ ಉದ್ಧೇಶದಿಂದ ಜನತಾದರ್ಶನ ನಡೆಸುತ್ತಿದ್ದು, ಇದನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ಜನತಾದರ್ಶದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳೇ ಹೆಚ್ಚಾಗಿ ಬಂದಿದಿದ್ದು ವಿಶೇಷವಾಗಿತ್ತು. ಸಲ್ಲಿಕೆಯಾದ ಒಟ್ಟು ಅರ್ಜಿಗಳಲ್ಲಿ ಶೇ.80ಕ್ಕೂ ಹೆಚ್ಚು ಅರ್ಜಿಗಳು ಕಂದಾಯ ಇಲಾಖೆ ಸಮಸ್ಯೆಗಳಿಗೆ ಸಂಬಂಧಿಸಿದ್ದಾಗಿದೆ.

ಉಳಿದ ಅರ್ಜಿಗಳು ಬೆಸ್ಕಾಂ, ಕೆಎಸ್ ಆರ್ ಟಿಸಿ, ಬೋರ್ ವೆಲ್ ಸೇರಿದಂತೆ ಇತರೆ ಅಹವಾಲುಗಳಾಗಿವೆ ಎಂದು ಸಚಿವರು ಮಾಹಿತಿ ನೀಡಿದರು.

ಎಲ್ಲ ಅರ್ಜಿಗಳ ವಿಲೇವಾರಿ ತರ್ಕಬದ್ಧವಾಗಿ ಮಾಡಲು ನಿರ್ದೇಶನ ನೀಡಲಾಗಿದ್ದು, ಜನರಿಗೆ ಸುಲಭ ಸೇವೆ ಸಿಗುವ ಜೊತೆಗೆ ಆಡಳಿತ ಪಾರದರ್ಶಕವಾಗಿರಬೇಕು, ಭ್ರಷ್ಟಾಚಾರಕ್ಕೆ ಅವಕಾಶ ಇರಬಾರದು ಎಂಬ ಉದ್ಧೇಶದಿಂದ ಜನತಾದರ್ಶನ ಆಯೋಜಿಸಲಾಗಿದೆ.

ಇದನ್ನು ಎಲ್ಲರೂ ಸದುಪಯೋಗಪಡಿಸಿಕೊಂಡು ಭ್ರಷ್ಟಾಚಾರ ರಹಿತವಾಗಿ ಸೇವೆಗಳನ್ನು ಪಡೆಯಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಕಂದಾಯ ಇಲಾಖೆಯಲ್ಲಿ ತಾಂತ್ರಿಕ ತೊಡುಕಿನ ಜೊತೆಗೆ ಕಾನೂನಿನ ತೊಡುಗಳಿರುವುದರಿಂದ ಕೆಲಸಗಳು ತಡವಾಗುತ್ತಿದ್ದು, ಇದರಿಂದಾಗಿಯೇ ಈ ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಹೆಚ್ಚಾಗಿ ಬಂದಿವೆ.

ಇಲಾಖೆಯಲ್ಲಿ ಮೇಲಾಧಿಕಾರಿಗಳು ಒಳ್ಳೆಯವರಿದ್ದರೂ, ಕೆಳಹಂತದ ಅಧಿಕಾರಿಗಳು ಅನೇಕ ವರ್ಷಗಳಿಂದ ಒಂದೇ ಕಡೆ ಇದ್ದು ಜಿಡ್ಡು ಹಿಡಿದಂತಾಗಿ ಜನರನ್ನು ಸತಾಯಿಸುತ್ತಿರುವುದು ಸಾಮಾನ್ಯವಾಗಿದೆ. ಈ ಕಾರಣಗಳಿಂದಲೇ ಕಂದಾಯ ಇಲಾಖೆಗೆ ಅಳೆದು ಚಪ್ಪಲಿ ಸವೆಯುತ್ತದೆ ಎಂಬ ಮಾತು ಚಾಲ್ತಿಗೆ ಬಂದಿದೆ. ಜನರ ಸಮಸ್ಯೆ ಬಗೆಹರಿಸಲು ಜನತಾದರ್ಶನ ಸಹಕಾರಿಯಾಗಲಿದೆ ಎಂದು ಸಚಿವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...