Monday, February 2, 2026
Monday, February 2, 2026

ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ ಹಲವೆಡೆ ಯಲ್ಲೋ ಅಲರ್ಟ್

Date:

ರಾಜ್ಯದಲ್ಲಿ ಚುಮು ಚುಮು ಚಳಿಯ ವಾತಾವರಣವಿದೆ. ಆದರೆ ನವೆಂಬರ್ 22ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು ಕಳೆದ ವಾರ ರಾಜ್ಯದಲ್ಲಿ ಮಳೆಯಾಗಿತ್ತು. ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿದಿತ್ತು. ಬಳಿಕ ಮೋಡ ಕವಿದ ವಾತಾವರಣ, ಚಳಿ ಮುಂದುವರೆದಿತ್ತು.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ನವೆಂಬರ್ 22ರ ಮಂಗಳವಾರದಿಂದ ಮಳೆಯಾಗಲಿದೆ. ಇದರಿಂದಾಗಿ ಚಳಿ ಒಂದೆರಡು ದಿನ ಕಡಿಮೆಯಾಗುವ ಸಾಧ್ಯತೆ ಇದೆ.

ಯಾವ ಜಿಲ್ಲೆಗಳಲ್ಲಿ ಮಳೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ಅನ್ವಯ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಚಳಿ ಸಹ ಮುಂದುವರೆಯಲಿದೆ.

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಮೈಸೂರು, ತುಮಕೂರು, ಹಾವೇರಿಯಲ್ಲಿಯೂ ಮಂಗಳವಾರದಿಂದ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚಳಿ ಇದೆ. ಅಲ್ಲದೇ ಭಾರೀ ಇಬ್ಬನಿಯೂ ಸುರಿಯುತ್ತಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪ್ರಭಾವದಿಂದ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿಯೂ ಮಳೆಯಾಗಲಿದೆ. ಪುದುಚೇರಿ ಮತ್ತು ಚೆನ್ನೈನಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...