Monday, August 3, 2026
Monday, August 3, 2026

ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ ಹಲವೆಡೆ ಯಲ್ಲೋ ಅಲರ್ಟ್

Date:

ರಾಜ್ಯದಲ್ಲಿ ಚುಮು ಚುಮು ಚಳಿಯ ವಾತಾವರಣವಿದೆ. ಆದರೆ ನವೆಂಬರ್ 22ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು ಕಳೆದ ವಾರ ರಾಜ್ಯದಲ್ಲಿ ಮಳೆಯಾಗಿತ್ತು. ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿದಿತ್ತು. ಬಳಿಕ ಮೋಡ ಕವಿದ ವಾತಾವರಣ, ಚಳಿ ಮುಂದುವರೆದಿತ್ತು.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ನವೆಂಬರ್ 22ರ ಮಂಗಳವಾರದಿಂದ ಮಳೆಯಾಗಲಿದೆ. ಇದರಿಂದಾಗಿ ಚಳಿ ಒಂದೆರಡು ದಿನ ಕಡಿಮೆಯಾಗುವ ಸಾಧ್ಯತೆ ಇದೆ.

ಯಾವ ಜಿಲ್ಲೆಗಳಲ್ಲಿ ಮಳೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ಅನ್ವಯ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಚಳಿ ಸಹ ಮುಂದುವರೆಯಲಿದೆ.

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಮೈಸೂರು, ತುಮಕೂರು, ಹಾವೇರಿಯಲ್ಲಿಯೂ ಮಂಗಳವಾರದಿಂದ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚಳಿ ಇದೆ. ಅಲ್ಲದೇ ಭಾರೀ ಇಬ್ಬನಿಯೂ ಸುರಿಯುತ್ತಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪ್ರಭಾವದಿಂದ ತಮಿಳುನಾಡು ರಾಜಧಾನಿ ಚೆನ್ನೈನಲ್ಲಿಯೂ ಮಳೆಯಾಗಲಿದೆ. ಪುದುಚೇರಿ ಮತ್ತು ಚೆನ್ನೈನಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...