Monday, August 3, 2026
Monday, August 3, 2026

ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ ತೀರ್ಥಹಳ್ಳಿಯಲ್ಲಿ ಪೋಲಿಸ್ ದಾಳಿ

Date:

ಮಂಗಳೂರು ಆಟೋದಲ್ಲಿ ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರರಿಗೆ ಸಂಬಂಧಪಟ್ಟಿದೆ ಎನ್ನಲಾದ ತೀರ್ಥಹಳ್ಳಿಯ 5 ಮನೆಗಳ ಮೇಲೆ ಇಂದು ಬೆಳಗಿನ ಜಾವ ಪೊಲೀಸರಿಂದ ದಾಳಿ ನಡೆಸಿದ್ದಾರೆ.

ಮಂಗಳೂರು ಕೋರ್ಟ್‌ ನಿಂದ ಸರ್ಚ್‌ ವಾರೆಂಟ್‌ ಪಡೆದು ಈ ದಾಳಿ ನಡೆಸಲಾಗಿದೆ. ಮೋಸ್ಟ್‌ ವಾಂಟೆಡ್‌ ಮತೀನ್‌ , ಬಂಧಿತ ಮಾಜ್‌ ಗೆ ಸಂಬಂಧಿಸಿದ ಎರಡು ಮನೆಗಳು ಮೇಲೂ ಪೊಲೀಸರು ದಾಳಿ ನಡೆಸಿ ಶೋಧ ನಡೆಸಿದ್ದಾರೆ. ಸಾಜಿದ್‌ ಮತ್ತು ಶಾರೀಕ್‌ ಸಂಬಂಧಿಯೊಬ್ಬರ ಮನೆಯಲ್ಲೂ ಪರಿಶೀಲನೆ ನಡೆದಿದೆ. ತೀರ್ಥಹಳ್ಳಿ ಡಿವೈಎಸ್ಪಿ ಶಾಂತವೀರಯ್ಯ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಆಗುಂಬೆ ಠಾಣಾಧಿಕಾರಿ ಶಿವಕುಮಾರ್‌, ಮಾಳೂರು ಠಾಣಾಧಿಕಾರಿ ಪ್ರವೀಣ್‌ ನೀಲಮ್ಮನವರ್‌ ಮತ್ತು ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಆರೋಪಿಗಳು ಎಸಗಿದ ಕೃತ್ಯಗಳ ಕುರಿತು ಕೆಲವು ಸಾಕ್ಷ್ಯಾಧಾರಗಳು ಮತ್ತು ಮಹತ್ವದ ಸುಳಿವುಗಳು ಲಭ್ಯವಾಗಿವೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...