Monday, June 23, 2025
Monday, June 23, 2025

ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ ತೀರ್ಥಹಳ್ಳಿಯಲ್ಲಿ ಪೋಲಿಸ್ ದಾಳಿ

Date:

ಮಂಗಳೂರು ಆಟೋದಲ್ಲಿ ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರರಿಗೆ ಸಂಬಂಧಪಟ್ಟಿದೆ ಎನ್ನಲಾದ ತೀರ್ಥಹಳ್ಳಿಯ 5 ಮನೆಗಳ ಮೇಲೆ ಇಂದು ಬೆಳಗಿನ ಜಾವ ಪೊಲೀಸರಿಂದ ದಾಳಿ ನಡೆಸಿದ್ದಾರೆ.

ಮಂಗಳೂರು ಕೋರ್ಟ್‌ ನಿಂದ ಸರ್ಚ್‌ ವಾರೆಂಟ್‌ ಪಡೆದು ಈ ದಾಳಿ ನಡೆಸಲಾಗಿದೆ. ಮೋಸ್ಟ್‌ ವಾಂಟೆಡ್‌ ಮತೀನ್‌ , ಬಂಧಿತ ಮಾಜ್‌ ಗೆ ಸಂಬಂಧಿಸಿದ ಎರಡು ಮನೆಗಳು ಮೇಲೂ ಪೊಲೀಸರು ದಾಳಿ ನಡೆಸಿ ಶೋಧ ನಡೆಸಿದ್ದಾರೆ. ಸಾಜಿದ್‌ ಮತ್ತು ಶಾರೀಕ್‌ ಸಂಬಂಧಿಯೊಬ್ಬರ ಮನೆಯಲ್ಲೂ ಪರಿಶೀಲನೆ ನಡೆದಿದೆ. ತೀರ್ಥಹಳ್ಳಿ ಡಿವೈಎಸ್ಪಿ ಶಾಂತವೀರಯ್ಯ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ಆಗುಂಬೆ ಠಾಣಾಧಿಕಾರಿ ಶಿವಕುಮಾರ್‌, ಮಾಳೂರು ಠಾಣಾಧಿಕಾರಿ ಪ್ರವೀಣ್‌ ನೀಲಮ್ಮನವರ್‌ ಮತ್ತು ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಆರೋಪಿಗಳು ಎಸಗಿದ ಕೃತ್ಯಗಳ ಕುರಿತು ಕೆಲವು ಸಾಕ್ಷ್ಯಾಧಾರಗಳು ಮತ್ತು ಮಹತ್ವದ ಸುಳಿವುಗಳು ಲಭ್ಯವಾಗಿವೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...