Thursday, February 5, 2026
Thursday, February 5, 2026

ಪ್ರಸವಪೂರ್ವ ಲಿಂಗ ಪತ್ತೆ ಅಪರಾಧ ಕಾಯಿದೆ ಬಿಗಿ ಅನುಷ್ಠಾನ

Date:

ಮಂಗಳೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನಿಂಗ್ ಸೆಂಟರ್‌ಗಳು ಪಿಸಿ ಮತ್ತು ಪಿಎನ್‌ಡಿಟಿ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್ ಕುಮಾರ್ ಸಲಹೆ ನೀಡಿದರು.

ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ತಂತ್ರ ವಿಧಾನಗಳ ನಿಷೇಧ (ಪಿಸಿ ಆಯಂಡ್ ಪಿಎನ್‌ಡಿಟಿ)ಕಾಯ್ದೆ ಅನುಷ್ಠಾನದ ಕುರಿತು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯ ಕಚೇರಿಯಲ್ಲಿ ನಡೆದ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗರ್ಭಪೂರ್ವ ಹಾಗೂ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಹಾಗೂ ಸ್ಕ್ಯಾನಿಂಗ್ ಸಂಸ್ಥೆಯವರು ಪಿಸಿ ಮತ್ತು ಪಿಎನ್‌ಡಿಟಿ ಕಾಯ್ಡೆ ಕಾನೂನನ್ನು ಅನುಷ್ಠಾನಗೊಳಿಸದಿರುವುದು ಶಿಕ್ಷಾರ್ಹ ಅಪರಾಧವಾಗಿದೆ.
ಪುರುಷ ಹಾಗೂ ಮಹಿಳೆಯರ ಸಮಾನ ಅನುಪಾತ ಕಾಪಾಡುವ ದೃಷ್ಟಿಯಿಂದ ಈ ಕಾಯ್ದೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿರುವ ಸ್ಕ್ಯಾನಿಂಗ್ ಸಂಸ್ಥೆಗಳನ್ನು 3 ತಿಂಗಳಿಗೊಮ್ಮೆ ಭೇಟಿ ಮಾಡಿ ತಪಾಸಣೆ ಹಾಗೂ ಮೇಲ್ವಿಚಾರಣೆ ನಡೆಸಬೇಕು. ಪಿಸಿ ಆಯಂಡ್ ಪಿಎನ್‌ಡಿಟಿ ಕಾಯ್ದೆಯನ್ನು ಅನುಷ್ಠಾನ ಮಾಡದ ಸಂಸ್ಥೆಗಳಿಗೆ ನೊಟೀಸ್ ನೀಡುವಂತೆ ಡಾ. ಕಿಶೋರ್ ಕುಮಾರ್ ಸೂಚಿಸಿದರು.

ಜಿಲ್ಲಾ ಸಲಹಾ ಸಮಿತಿಯ ಅಧ್ಯಕ್ಷೆ ಡಾ.ವತ್ಸಲಾ ಕಾಮತ್, ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷ ಡಾ.ದೀಪಾ ಪ್ರಭು ಕೆ.ಪಿ., ಸದಸ್ಯರಾದ ಡಾ.ಅಮೃತ ಭಂಡಾರಿ, ಡಾ.ಸುಂದರಿ, ಡಾ.ಶೈಲಜಾ, ಡಾ.ಅನಿತ್‌ರಾಜ್, ವಕೀಲರಾದ ಚಂದ್ರಹಾಸ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...