Thursday, May 14, 2026
Thursday, May 14, 2026

ಜನವರಿ 6ರಿಂದ 86ನೇ ಕನ್ನಡ ಸಾಹಿತ್ಯ ಸಮ್ಮೇಳನ

Date:

ಜನವರಿ 6ರಿಂದ ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನವು ಪ್ಲಾಸ್ಟಿಕ್ ಮುಕ್ತವಾಗಿರಲಿದೆ. ಮೂರು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ 3ರಿಂದ 4 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಪ್ಲಾಸ್ಟಿಕ್ ವಸ್ತುಗಳನ್ನು ದೂರವಿಡುವ ಮೂಲಕ ಇದನ್ನು ಯಶಸ್ವಿಯಾಗಿಸಲು ಸಂಘಟನಾ ಸಮಿತಿ ಶ್ರಮಿಸುತ್ತಿದೆ.

ಪ್ರಕೃತಿಯನ್ನು ಬೆಂಬಲಿಸಲು ಮತ್ತು ದೊಡ್ಡ ಕಾರ್ಯಕ್ರಮಗಳಿಂದ ಪ್ಲಾಸ್ಟಿಕ್ ಬಳಕೆಯನ್ನು ತೊಡೆದುಹಾಕಲು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಮರುಬಳಕೆ ಮಾಡಬಹುದಾದ ಉತ್ಪನ್ನಗಳನ್ನು ಬಳಸಲು ನಿರ್ಧರಿಸಿದೆ.

ಕೋವಿಡ್-19 ಸಾಂಕ್ರಾಮಿಕದಿಂದಾಗಿ ಎರಡು ವರ್ಷಗಳ ಬಳಿಕ ಹಾವೇರಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ.

ಹಾವೇರಿ ಜಿಲ್ಲೆಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರವಾಗಿದ್ದು, ಎಲ್ಲಾ ಸಂಘಟನಾ ಸಮಿತಿಗಳು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶ್ರಮಿಸುತ್ತಿವೆ.

ಕಾರ್ಯಕ್ರಮವು ಪ್ರಾಸ್ಟಿಕ್ ಮುಕ್ತವಾಗಲಿದೆ ಮತ್ತು ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಕಡಿಮೆ ಮಾಡಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಆಹಾರ ಕೌಂಟರ್‍ಗಳಲ್ಲಿ ನಾವು ಅಡಗೆ ಎಲೆಯಿಂದ ಮಾಡಿದ ಪ್ಲೇಟ್‍ಗಳು, ಚಮಚಗಳು ಮತ್ತು ಕಪ್‍ಗಳನ್ನು ಬಳಸುತ್ತಿದ್ದೇವೆ.

ಈ ಹಿಂದಿನ ಸಮ್ಮೇಳನದಲ್ಲಿ ಆಹಾರವನ್ನು ಪ್ಲಾಸ್ಟಿಕ್ ಪ್ಲೇಟ್‍ಗಳಲ್ಲಿ ನೀಡಲಾಗುತ್ತಿತ್ತು. ಈ ಬಾರಿ ಮರುಬಳಕೆ ಮಾಡಬಹುದಾದ ವಸ್ತುಗಳನ್ನು ನೀಡಲಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

Kuvempu University ಕುವೆಂಪು ವಿಶ್ವವಿದ್ಯಾಲಯದ ವನ್ಯಜೀವಿ ಮತ್ತು ನಿರ್ವಹಣಾ ಸ್ನಾತಕೋತ್ತರ ಅಧ್ಯಯನ...

Karnataka Sanga ಕರ್ನಾಟಕ ಸಂಘದಲ್ಲಿ ಇಬ್ಬರು ಹಿರಿಯ ಮಹನೀಯರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

Karnataka Sanga ಶಿವಮೊಗ್ಗ ಕರ್ನಾಟಕ ಸಂಘದಲ್ಲಿ ದಿನಾಂಕ 15 ಮೇ 2026ರ...

ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 𝗠𝗲𝘁𝗿𝗼 𝗖𝗼𝗮𝗰𝗵 ಗಳ ಖರೀದಿಗೆ 𝗜𝗖𝗙 ಜೊತೆ ಒಪ್ಪಂದ, ₹𝟭,𝟱𝟭𝟯.𝟳𝟱 ಕೋಟಿ ಮೊತ್ತದ ಕಾರ್ಯಾದೇಶ

ಬೆಂಗಳೂರು ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡಲಿರುವ ಬಹುನಿರೀಕ್ಷಿತ ಬೆಂಗಳೂರು ಉಪನಗರ...