Monday, May 4, 2026
Monday, May 4, 2026

ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿಗೆ ಸಿದ್ಧಶ್ರೀ ಪ್ರಶಸ್ತಿ

Date:

ಕಾಂತಾರ ಖ್ಯಾತಿಯ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರಿಗೆ ಡಿ.2ರಂದು ನಡೆಯಲಿರುವ ಶ್ರೀ ಷಡಕ್ಷರಿ ಶಿವಯೋಗಿ ಡಾ| ಮುರುಘ ರಾಜೇಂದ್ರ ಮಹಾ ಸ್ವಾಮಿಗಳ 38ನೇ ಗುರು ವಂದನಾ ಮಹೋತ್ಸವದಲ್ಲಿ ರಾಷ್ಟ್ರ ಮಟ್ಟದ ಸಿದ್ಧಶ್ರೀ ಪ್ರಶಸ್ತಿ ನೀಡಿ ಗೌರವಿಸ ಲಾಗುವುದು ಎಂದು ಗುರುವಂದನ ಸ್ವಾಗತ ಸಮಿತಿ ಗೌರವ ಅಧ್ಯಕ್ಷ ಅಭಿನವ ಶಿವಲಿಂಗ ಸ್ವಾಮೀಜಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 38ನೇ ಗುರುವಂದನೆ ಮಹೋತ್ಸವದ ಅಂಗವಾಗಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಡಿ.1ರಂದು ಮುಗಳಖೋಡ ಶ್ರೀಮಠದ ಗೋ ಶಾಲೆಯಲ್ಲಿ 38 ಗೋಮಾತೆ ಪೂಜೆ ನೆರವೇರಿಸಲಾಗುವುದು.

ಪರಿಸರ ಕಾಳಜಿಯ ಹಿನ್ನೆಲೆಯಲ್ಲಿ 5 ಸಾವಿರ ಸಸಿಗಳನ್ನು ನೆಡಲಾಗುವುದು.
ಮಹೋತ್ಸವದಲ್ಲಿ ಹರ-ಗುರು-ಚರ ಮೂರ್ತಿಗಳು ರಾಜಕೀಯ ಧುರೀಣರು ಉಪಸ್ಥಿತರಿರಲಿದ್ದು, ಐದು ರಾಜ್ಯಗಳಿಂದ 1.5 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳಲಿದ್ದಾರೆ.

ಖ್ಯಾತ ಸಾಹಿತಿಗಳಾದ ವಿ.ನಾಗೇಂದ್ರ ಪ್ರಸಾದ ಮತ್ತು ಡಾ|ಶಿವಶಂಕರಪ್ಪ ಸಾಹುಕಾರ, ಕೆಪಿಎಸ್‌ಸಿ ಚೇರ್ಮನ್‌ ಅವರನ್ನು ವಿಶೇಷವಾಗಿ ಗೌರವಿಸಲಾಗುವುದು. ಸಂಜೆ ಖ್ಯಾತ ಹಿನ್ನೆಲೆ ಗಾಯಕರಾದ ವಿಜಯ ಪ್ರಕಾಶ ತಂಡದಿಂದ ಸ್ವರ ಸಂಗೀತ ಸಂಭ್ರಮ ಹಾಗೂ ಗುರುವಂದನ ಮಹೋತ್ಸವ ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡಗಳಿಂದ ವಿಶೇಷ ಪ್ರತಿಭೆಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...