Wednesday, February 4, 2026
Wednesday, February 4, 2026

ಭಾರತೀಯ ಸಂಗೀತದ ಅಭಿರುಚಿ ವಿಶ್ವದಾದ್ಯಂತ ಹಬ್ಬುತ್ತಿದೆ-ಮೋದಿ

Date:

ಭಾರತೀಯ ಶಾಸ್ತ್ರೀಯ ಸಂಗೀತ ಮತ್ತು ದೇಶದ ಹೊರಗೆ ಅದರ ಕ್ರೇಜ್ ಅನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತೀಯ ಶಾಸ್ತ್ರೀಯ ಸಂಗೀತ ಉಪಕರಣಗಳ ರಫ್ತು ಹೆಚ್ಚಾಗಿದೆ ಮತ್ತು ಅವುಗಳ ಅತಿದೊಡ್ಡ ಖರೀದಿದಾರರಲ್ಲಿ ಅಭಿವೃದ್ಧಿ ಹೊಂದಿದ ದೇಶಗಳಾದ ಯುಎಸ್‌ಎ ಮತ್ತು ಯುಕೆ ಸೇರಿವೆ ಎಂದು ಹೇಳಿದರು.

ಮನ್ ಕಿ ಬಾತ್’ ಕಾರ್ಯಕ್ರಮದ 95ನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ‘ಕಳೆದ ವರ್ಷದಿಂದ ಭಾರತದಿಂದ ಸಂಗೀತ ಉಪಕರಣಗಳ ರಫ್ತು 3.5 ಪಟ್ಟು ಹೆಚ್ಚಾಗಿದೆ. ಇದು ಭಾರತೀಯ ಶಾಸ್ತ್ರೀಯ ಸಂಗೀತದಲ್ಲಿ ಪ್ರಪಂಚದ ಆಸಕ್ತಿಯನ್ನು ತೋರಿಸುತ್ತದೆ. ಕಳೆದ ಎಂಟು ವರ್ಷಗಳಲ್ಲಿ, ಸಂಗೀತ ಉಪಕರಣಗಳ ರಫ್ತು 3.5 ಪಟ್ಟು ಹೆಚ್ಚಾಗಿದೆ.

ಎಲೆಕ್ಟ್ರಿಕಲ್ ಸಂಗೀತ ಉಪಕರಣಗಳ ರಫ್ತು ಕೂಡ 60 ಪಟ್ಟು ಹೆಚ್ಚಾಗಿದೆ. ಇದು ಭಾರತೀಯ ಸಂಸ್ಕೃತಿ ಮತ್ತು ಸಂಗೀತದ ಗೀಳು ಪ್ರಪಂಚದಾದ್ಯಂತ ಹೆಚ್ಚುತ್ತಿದೆ ಎಂದು ಸೂಚಿಸುತ್ತದೆ.

ಭಾರತೀಯ ಸಂಗೀತ ವಾದ್ಯಗಳ ಅತಿದೊಡ್ಡ ಖರೀದಿದಾರರು ಯುಎಸ್‌ಎ, ಜರ್ಮನಿ, ಫ್ರಾನ್ಸ್, ಜಪಾನ್ ಮತ್ತು ಯುಕೆ ಮುಂತಾದ ಅಭಿವೃದ್ಧಿ ಹೊಂದಿದ ದೇಶಗಳು’ ಎಂದು ಹೇಳಿದರು.

ಮಹಾತ್ಮಾ ಗಾಂಧಿಯವರ ಅಚ್ಚುಮೆಚ್ಚಿನ ಹಾಡು ಎಂದು ಹೇಳಲಾದ ವೈಶವ್ ಜನತೋ ಹಾಡನ್ನು ಮಾಡಿದ ಗ್ರೀಸ್ ಕಲಾವಿದ ಕಾನ್ಸ್ಟಾಂಟಿನೋಸ್ ಕಲೈಟ್ಜಿಸ್ ಅವರ ಬಗ್ಗೆ ಪ್ರಧಾನಿ ಪ್ರಸ್ತಾಪಿಸಿದರು.

ಅಷ್ಟೇ ಅಲ್ಲದೇ, ಭಾರತದ ಶಾಸ್ತ್ರೀಯ ಸಂಗೀತ ಮತ್ತು ನೃತ್ಯ ಸಂಪ್ರದಾಯಗಳನ್ನು ಅಧ್ಯಯನ ಮಾಡಲು ಕಾನ್ಸ್ಟಾಂಟಿನೋಸ್ ಕಳೆದ 42 ವರ್ಷಗಳಲ್ಲಿ ನಿಯಮಿತವಾಗಿ ಭಾರತಕ್ಕೆ ಭೇಟಿ ನೀಡಿದ್ದಾರೆ ಎಂದರು.

‘ನಮ್ಮ ಸಂಸ್ಕೃತಿಯಲ್ಲಿ ಶಾಸ್ತ್ರೀಯ ಸಂಗೀತವನ್ನು ದೈವಿಕವೆಂದು ಪರಿಗಣಿಸಲಾಗುತ್ತದೆ. ನಮ್ಮ ಎಲ್ಲಾ ದೇವರು ಮತ್ತು ದೇವತೆಗಳು ಅನೇಕ ಸಂಗೀತ ವಾದ್ಯಗಳನ್ನು ನುಡಿಸುತ್ತಾರೆ. ಹರಿಯುವ ನದಿಗಳಿಂದ ಹಿಡಿದು ಪಕ್ಷಿಗಳ ಚಿಲಿಪಿಲಿ ನಾದದವರೆಗೆ ನಾವು ಎಲ್ಲೆಡೆ ಸಂಗೀತವನ್ನು ಕಾಣಬಹುದು. ನಮ್ಮ ಸಂಗೀತ ಪ್ರಕಾರಗಳು ನಮ್ಮ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿವೆ. ಅದು ಜಗತ್ತಿನ ಮೇಲೆ ಅಳಿಸಲಾಗದ ಛಾಪು ಮೂಡಿಸಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...