Tuesday, October 1, 2024
Tuesday, October 1, 2024

ಚಾರ್ಮಾಡಿ ‌ಭಾಗದಲ್ಲಿ ಬಾಂಬ್ ಸ್ಫೋಟ

Date:

ನಾಗುರಿಯಲ್ಲಿ ರಿಕ್ಷಾದಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸದಿಂತೆ ತನಿಖೆ ಚುರುಕುಗೊಂಡಿದೆ. ಮಂಗಳೂರು ಬ್ಲಾಸ್ಟ್ ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ನಡೆಸುತ್ತಿದೆ. ಮಂಗಳೂರು ಬ್ಲಾಸ್ಟ್ ಬೆನ್ನಲ್ಲೇ ಇದೀಗ ಪಶ್ಚಿಮಘಟ್ಟದ ತಪ್ಪಲು ಚಾರ್ಮಾಡಿ ಭಾಗದಲ್ಲಿ ಬಾಂಬ್ ಬ್ಲಾಸ್ಟ್ ಆಗಿರುವ ಸ್ಟೋಟ ಮಾಹಿತಿ ಲಭ್ಯವಾಗಿದೆ.

ಮಂಗಳೂರು ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸ್ಫೋಟಕ ಮಾಹಿತಿಗಳು ಬಯಲಾಗುತ್ತಲೇ ಇವೆ. ಉಗ್ರರು ಬಾಂಬ್‌ ಬ್ಲಾಸ್ಟ್‌ ಮಾಡಲು ಹಲವಾರು ಪ್ರದೇಶಗಳನ್ನು ಟಾರ್ಗೆಟ್‌ ಮಾಡಿದ್ದು, ಹಲವೆಡೆ ಟ್ರಯಲ್‌ ಬ್ಲಾಸ್ಟ್‌ ಕೂಡ ನಡೆಸಿದ್ದಾರೆ. ಇದೀಗ ಬಾಂಬ್‌ ಬಾಸ್ಟ್‌ ಪ್ರರಣಕ್ಕೆ ಇನ್ನೊಂದು ಟ್ವಿಸ್ಟ್‌ ಸಿಕ್ಕಿದ್ದು, ಚಾರ್ಮಾಡಿ ತಪ್ಪಲಿನಲ್ಲೂ ಕೂಡ ಟ್ರಯಲ್‌ ಬ್ಲಾಸ್ಟ್‌ ನಡೆದಿದೆ ಎಂಬ ಮಾಹಿತಿ ಬಯಲಾಗಿದೆ.

ಮಂಗಳೂರಲ್ಲಿ ಬಂಧನಕ್ಕೆ ಒಳಗಾಗಿರುವ ಉಗ್ರ ಶಾರೀಖ್‌ ಸ್ಯಾಟಲೈಟ್‌ ಫೋನ್‌ ಬಳಸಿ ಭಯೋತ್ಪಾದಕ ಸಂಘಟನೆಗಳೊಂದಿಗೆ ಮಾತನಾಡುತ್ತಿದ್ದ ಎಂಬ ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು ತನಿಖೆಗೆ ಇಳಿದಿದ್ದರು. ಹಲವು ಪ್ರದೇಶಗಳಲ್ಲಿ ಸ್ಯಾಟಲೈಟ್‌ ತನಿಖೆ ನಡೆಸುತ್ತಿದ್ದು, ಚಾರ್ಮಾಡಿ ತಪ್ಪಲಿನಲ್ಲೂ ಕೂಡ ತನಿಖೆಯನ್ನು ನಡೆಸಿದ್ದಾರೆ. ಚಾರ್ಮಾಡಿ ಅರಣ್ಯ ಪ್ರದೇಶದ ತಪ್ಪಲಿನಲ್ಲಿ ಸ್ಯಾಟಲೈಟ್‌ ತನಿಖೆ ನಡೆಸುವ ವೇಳೆಯಲ್ಲಿ ಪೊಲೀಸರಿಗೆ ಸ್ಫೋಟಕ ಮಾಹಿತಿಯೊಂದು ದೊರೆತಿದ್ದು, ಚಾರ್ಮಾಡಿ ತಪ್ಪಲಿನ ಅರಣ್ಯ ಪ್ರದೇಶದಲ್ಲಿಯೂ ಕೂಡ ಉಗ್ರರು ಟ್ರಯಲ್‌ ಬ್ಲಾಸ್ಟ್‌ ನಡೆಸಿದ್ದರು ಎನ್ನುವುದು ತಿಳಿದುಬಂದಿದೆ. ಈ ಹಿಂದೆ ಶಿವಮೊಗ್ಗದಲ್ಲಿಯೂ ಕೂಡ ಉಗ್ರ ಶಾರೀಖ್‌ ಹಾಗೇ ಇನ್ನೂ ಕೆಲವು ಉಗ್ರರು ಟ್ರಯಲ್‌ ಬ್ಲಾಸ್ಟ್‌ ನಡೆಸಿದ್ದರು. ಇದೀಗ ಚಾರ್ಮಾಡಿ ತಪ್ಪಲಿನಲ್ಲೂ ಕೂಡ ಟ್ರಯಲ್‌ ಬ್ಲಾಸ್ಟ್‌ ನಡೆದಿದೆ ಎಂಬುದು ತಿಳಿದು ಬಂದಿದೆ.

ಮಂಗಳೂರಲ್ಲಿ ಬಂಧನಕ್ಕೆ ಒಳಗಾಗಿರುವ ಉಗ್ರ ಶಾರೀಖ್‌ ಸ್ಯಾಟಲೈಟ್‌ ಫೋನ್‌ ಬಳಸಿ ಭಯೋತ್ಪಾದಕ ಸಂಘಟನೆಗಳೊಂದಿಗೆ ಮಾತನಾಡುತ್ತಿದ್ದ ಎಂಬ ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು ತನಿಖೆಗೆ ಇಳಿದಿದ್ದರು. ಹಲವು ಪ್ರದೇಶಗಳಲ್ಲಿ ಸ್ಯಾಟಲೈಟ್‌ ತನಿಖೆ ನಡೆಸುತ್ತಿದ್ದು, ಚಾರ್ಮಾಡಿ ತಪ್ಪಲಿನಲ್ಲೂ ಕೂಡ ತನಿಖೆಯನ್ನು ನಡೆಸಿದ್ದಾರೆ. ಚಾರ್ಮಾಡಿ ಅರಣ್ಯ ಪ್ರದೇಶದ ತಪ್ಪಲಿನಲ್ಲಿ ಸ್ಯಾಟಲೈಟ್‌ ತನಿಖೆ ನಡೆಸುವ ವೇಳೆಯಲ್ಲಿ ಪೊಲೀಸರಿಗೆ ಸ್ಫೋಟಕ ಮಾಹಿತಿಯೊಂದು ದೊರೆತಿದ್ದು, ಚಾರ್ಮಾಡಿ ತಪ್ಪಲಿನ ಅರಣ್ಯ ಪ್ರದೇಶದಲ್ಲಿಯೂ ಕೂಡ ಉಗ್ರರು ಟ್ರಯಲ್‌ ಬ್ಲಾಸ್ಟ್‌ ನಡೆಸಿದ್ದರು ಎನ್ನುವುದು ತಿಳಿದುಬಂದಿದೆ. ಈ ಹಿಂದೆ ಶಿವಮೊಗ್ಗದಲ್ಲಿಯೂ ಕೂಡ ಉಗ್ರ ಶಾರೀಖ್‌ ಹಾಗೇ ಇನ್ನೂ ಕೆಲವು ಉಗ್ರರು ಟ್ರಯಲ್‌ ಬ್ಲಾಸ್ಟ್‌ ನಡೆಸಿದ್ದರು. ಇದೀಗ ಚಾರ್ಮಾಡಿ ತಪ್ಪಲಿನಲ್ಲೂ ಕೂಡ ಟ್ರಯಲ್‌ ಬ್ಲಾಸ್ಟ್‌ ನಡೆದಿದೆ ಎಂಬುದು ತಿಳಿದು ಬಂದಿದೆ.

ಚಾರ್ಮಾಡಿ ತಪ್ಪಲಿನಲ್ಲಿರುವ ಬೆಳ್ತಂಗಡಿ ತಾಲೂಕಿನ ಬೆಂದ್ರಾಳ ಅರಣ್ಯಪ್ರದೇಶದಲ್ಲಿ ಸುಮಾರು ಏಳು ದಿನಗಳ ಹಿಂದೆ ರಾತ್ರಿ 11 ಗಂಟೆಯ ಸುಮಾರಿಗೆ ಟ್ರಯಲ್‌ ಬ್ಲಾಸ್ಟ್‌ ನಡೆದಿರುವುದು ತನಿಖೆ ವೇಳೆ ತಿಳಿದುಬಂದಿದೆ. ಭಾರೀ ಪ್ರಮಾಣದಲ್ಲಿ ಬಾಂಬ್‌ ಸ್ಫೋಟಗೊಂಡಿದೆ. ಸ್ಥಳೀಯರು ಸ್ಫೋಟದ ತೀವ್ರತೆಗೆ ಬೆಚ್ಚಿಬಿದ್ದಿದ್ದಾರೆ ಎಂದು ಸ್ಥಳೀಯರಾದ ಚೆಲುವಮ್ಮ ಎನ್ನುವವರು ಪೊಲೀಸರಿಗೆ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...