Sunday, August 23, 2026
Sunday, August 23, 2026

ಆರ್ಥಿಕ ಸ್ಥಿತಿ ಪರಿಗಣಿಸಿ ಮೀಸಲಾತಿ ಕಲ್ಪಿಸಿ- ಕುಮಾರಸ್ವಾಮಿ

Date:

ರಾಜ್ಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡುವ ಬದಲಿಗೆ ಆಯಾ ಸಮಾಜಗಳ ಆರ್ಥಿಕ ಪರಿಸ್ಥಿತಿ ಆಧರಿಸಿ ಮೀಸಲಾತಿ ಕಲ್ಪಿಸುವ ಮೂಲಕ ದೇಶದಲ್ಲಿ ಬಡತನ ನಿರ್ಮೂಲನೆ ಮಾಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲೆಡೆ ಮೀಸಲಾತಿ ನೀಡಬೇಕೆಂದು ವಿವಿಧ ಸಮಾಜದವರು ಒತ್ತಾಯ ಮಾಡುತ್ತಿದ್ದಾರೆ.
ಜನಸಂಖ್ಯೆ ಆಧಾರವಾಗಿಟ್ಟುಕೊಂಡು ಮೀಸಲಾತಿ ನೀಡುತ್ತಾ ಬಂದಿದ್ದೇವೆ. ಆದರೂ ಬಡತನ ನಿರ್ಮೂಲನೆ ಆಗಿಲ್ಲ.

ಆದ್ದರಿಂದ, ಜನಸಂಖ್ಯೆಗಿಂತಲೂ ಸಮಾಜದ ಆರ್ಥಿಕ ಪರಿಸ್ಥಿತಿ ಗಮನಿಸಿ ಮೀಸಲಾತಿ ಸೌಲಭ್ಯ ನೀಡುವ ಮೂಲಕ ಬಡತನ ನಿರ್ಮೂಲನೆ ಮಾಡಬೇಕು ಎಂದರು.

ಒಕ್ಕಲಿಗ ಸಮಾಜಕ್ಕೆ ಮೀಸಲಾತಿ ಹೆಚ್ಚಿಸಲು ಸರ್ಕಾರಕ್ಕೆ ಗಡುವು ನೀಡಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಶೇ.12ರಷ್ಟು ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಒಕ್ಕಲಿಗರ ಜನಸಂಖ್ಯೆ ಉಪಜಾತಿಗಳು ಸಹಿತ ಆರ್ಥಿಕ ಪರಿಸ್ಥಿತಿಯ ವರದಿಯನ್ನು ಸಿದ್ಧಪಡಿಸಿಕೊಂಡು ಸರ್ಕಾರಕ್ಕೆ ಗಡುವು ನೀಡಬೇಕು ಎಂದು ಸಲಹೆ ನೀಡಿರುವುದಾಗಿ ಸ್ಪಷ್ಟಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...