Wednesday, October 2, 2024
Wednesday, October 2, 2024

ನಿವೃತ್ತಿಗೊಂಡು ನಾಲ್ಕು ವರ್ಷವಾದ ನೌಕರರ ವಿರುದ್ಧ ತನಿಖೆಗೆ ಅವಕಾಶವಿಲ್ಲ

Date:

ನಾಲ್ಕು ವರ್ಷಗಳ ಹಿಂದಿನ ಘಟನೆಗೆ ಸಂಬಂಧಿಸಿದಂತೆ ನಿವೃತ್ತ ನೌಕರರ ವಿರುದ್ಧ ತನಿಖೆ ನಡೆಸಲು ಅವಕಾಶವಿಲ್ಲವೆಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಕರ್ನಾಟಕ ನಾಗರೀಕ ಸೇವೆಗಳ ಅಧಿನಿಯಮದ ನಿಯಮ 214ರ 2(ಬಿ) (ಜಿಜಿ) ಪ್ರಕಾರ ಇದಕ್ಕೆ ಅವಕಾಶವಿಲ್ಲವೆಂಬುದನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕ ಗೃಹ ಮಂಡಳಿಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅನಿಲ್ ಕುಮಾರ್ ಹಾಗೂ ಟಿ. ಮಲ್ಲಣ್ಣ ವಿರುದ್ಧ 2006ರಲ್ಲಿ ನಡೆದಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022ರ ಜೂನ್ 21ರಂದು ಮೆಮೋ ಜಾರಿಗೊಳಿಸಲಾಗಿತ್ತು.

ಆದರೆ ಅನಿಲ್ ಕುಮಾರ್ 2018ರ ಜೂನ್ 30ರಂದು ನಿವೃತ್ತಿಯಾಗಿದ್ದರೆ, ಮಲ್ಲಣ್ಣ 2020 ರ ಆಗಸ್ಟ್ 30 ರಂದು ನಿವೃತ್ತರಾಗಿದ್ದರು. ಹೀಗಾಗಿ 2006 ರಂದು ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ಈಗ ಮೆಮೋ ನೀಡಲಾಗಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದರ ವಿಚಾರಣೆ ನಡೆಸಿದ ನ್ಯಾಯಾಲಯ ತನಿಖೆಗೆ ಅವಕಾಶವಿಲ್ಲವೆಂದು ತೀರ್ಪು ಪ್ರಕಟಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...