Sunday, August 23, 2026
Sunday, August 23, 2026

ನಿವೃತ್ತಿಗೊಂಡು ನಾಲ್ಕು ವರ್ಷವಾದ ನೌಕರರ ವಿರುದ್ಧ ತನಿಖೆಗೆ ಅವಕಾಶವಿಲ್ಲ

Date:

ನಾಲ್ಕು ವರ್ಷಗಳ ಹಿಂದಿನ ಘಟನೆಗೆ ಸಂಬಂಧಿಸಿದಂತೆ ನಿವೃತ್ತ ನೌಕರರ ವಿರುದ್ಧ ತನಿಖೆ ನಡೆಸಲು ಅವಕಾಶವಿಲ್ಲವೆಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಕರ್ನಾಟಕ ನಾಗರೀಕ ಸೇವೆಗಳ ಅಧಿನಿಯಮದ ನಿಯಮ 214ರ 2(ಬಿ) (ಜಿಜಿ) ಪ್ರಕಾರ ಇದಕ್ಕೆ ಅವಕಾಶವಿಲ್ಲವೆಂಬುದನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕ ಗೃಹ ಮಂಡಳಿಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅನಿಲ್ ಕುಮಾರ್ ಹಾಗೂ ಟಿ. ಮಲ್ಲಣ್ಣ ವಿರುದ್ಧ 2006ರಲ್ಲಿ ನಡೆದಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022ರ ಜೂನ್ 21ರಂದು ಮೆಮೋ ಜಾರಿಗೊಳಿಸಲಾಗಿತ್ತು.

ಆದರೆ ಅನಿಲ್ ಕುಮಾರ್ 2018ರ ಜೂನ್ 30ರಂದು ನಿವೃತ್ತಿಯಾಗಿದ್ದರೆ, ಮಲ್ಲಣ್ಣ 2020 ರ ಆಗಸ್ಟ್ 30 ರಂದು ನಿವೃತ್ತರಾಗಿದ್ದರು. ಹೀಗಾಗಿ 2006 ರಂದು ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ಈಗ ಮೆಮೋ ನೀಡಲಾಗಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದರ ವಿಚಾರಣೆ ನಡೆಸಿದ ನ್ಯಾಯಾಲಯ ತನಿಖೆಗೆ ಅವಕಾಶವಿಲ್ಲವೆಂದು ತೀರ್ಪು ಪ್ರಕಟಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...