Sunday, December 7, 2025
Sunday, December 7, 2025

ಜ್ಞಾನ ವಾಹಿನಿಗಳ ಕಾರ್ಯಕ್ರಮ ಕನ್ನಡದಲ್ಲಿ ಬಿತ್ತರಿಸಲು ಮನವಿ

Date:

ಜಗತ್ತಿನ ಜ್ಞಾನ ವಾಹಿನಿಗಳಾದ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳನ್ನು ಕನ್ನಡದಲ್ಲಿ ಪ್ರಸಾರ ಮಾಡುವಂತೆ ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವರಾದ ಅನುರಾಗ್ ಸಿಂಗ್ ಠಾಕೂರ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮನವಿ ಮಾಡಿದೆ.

ಜಗತ್ತಿನ ಜ್ಞಾನ ವಾಹಿನಿಗಳಾದ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ತಮಿಳಿನಲ್ಲಿ, ತೆಲುಗಿನಲ್ಲಿ, ಹಿಂದಿಯಲ್ಲಿ ಡಬ್ಬಿಂಗ್ ಆಗಿ ಅಂದಿನಿಂದ ಪ್ರಸಾರವಾಗುತ್ತಿದ್ದು, ಭೂ ಜೀವ ಜಗತ್ತಿನ ಅದ್ಭುತ ಸುಂದರ ವಿಷಯಗಳೆಲ್ಲಾ ಅಲ್ಲಿನ ಜನಗಳಿಗೆ ಅವರ ಅವರ ಪ್ರಾದೇಶಿಕ ಭಾಷೆಗಳಲ್ಲಿ ದೊರಕುತ್ತಿವೆ.

ಈ ಭೂಮಿಯ ಮೇಲಿನ ಜೀವಜಗತ್ತಿನ ಅದ್ಭುತ ವೈವಿಧ್ಯತೆಗಳನ್ನು ವೈಚಿತ್ರಗಳನ್ನು ಅವುಗಳ ನಿಗೂಢ ಜೀವನ ಕ್ರಮಗಳನ್ನು ಹಾಗೂ ಅವುಗಳೆಲ್ಲಾ ಅಳಿವಿನಂಚೆಗೆ ಹೋಗುತ್ತಿರುವ ಭೀಕರತೆಗಳನ್ನೆಲ್ಲ ಜಗತ್ತಿನ ಎಲ್ಲ ಜನಗಳು ಅವರವರ ಮಾತೃಭಾಷೆಗಳಲ್ಲಿ ಅರಿತುಕೊಳ್ಳುವ ಅನಿವಾರ್ಯತೆ ಇದೆ. ಆದರೆ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ಕನ್ನಡ ಭಾಷೆಯಲ್ಲಿ ಪ್ರಸಾರವಾಗದೇ ಇರುವುದರಿಂದ ಅದರಲ್ಲಿ ಜೀವ ವೈವಿಧ್ಯದ ಜ್ಞಾನ ಕನ್ನಡಿಗರನ್ನು ತಲುಪುತ್ತಿಲ್ಲ. ಆದ್ದರಿಂದ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ಕನ್ನಡದಲ್ಲಿ ಪ್ರಸಾರವಾಗಬೇಕೆಂದು ಕನ್ನಡಿಗರು ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ಒತ್ತಾಯಿಸುತ್ತಿದ್ದಾರೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಸುನಿಲ್ ಕುಮಾರ್ ಅವರು ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವರಾದ ಅನುರಾಗ್ ಸಿಂಗ್ ಠಾಕೂರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...