Tuesday, October 1, 2024
Tuesday, October 1, 2024

ಜ್ಞಾನ ವಾಹಿನಿಗಳ ಕಾರ್ಯಕ್ರಮ ಕನ್ನಡದಲ್ಲಿ ಬಿತ್ತರಿಸಲು ಮನವಿ

Date:

ಜಗತ್ತಿನ ಜ್ಞಾನ ವಾಹಿನಿಗಳಾದ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳನ್ನು ಕನ್ನಡದಲ್ಲಿ ಪ್ರಸಾರ ಮಾಡುವಂತೆ ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವರಾದ ಅನುರಾಗ್ ಸಿಂಗ್ ಠಾಕೂರ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮನವಿ ಮಾಡಿದೆ.

ಜಗತ್ತಿನ ಜ್ಞಾನ ವಾಹಿನಿಗಳಾದ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ತಮಿಳಿನಲ್ಲಿ, ತೆಲುಗಿನಲ್ಲಿ, ಹಿಂದಿಯಲ್ಲಿ ಡಬ್ಬಿಂಗ್ ಆಗಿ ಅಂದಿನಿಂದ ಪ್ರಸಾರವಾಗುತ್ತಿದ್ದು, ಭೂ ಜೀವ ಜಗತ್ತಿನ ಅದ್ಭುತ ಸುಂದರ ವಿಷಯಗಳೆಲ್ಲಾ ಅಲ್ಲಿನ ಜನಗಳಿಗೆ ಅವರ ಅವರ ಪ್ರಾದೇಶಿಕ ಭಾಷೆಗಳಲ್ಲಿ ದೊರಕುತ್ತಿವೆ.

ಈ ಭೂಮಿಯ ಮೇಲಿನ ಜೀವಜಗತ್ತಿನ ಅದ್ಭುತ ವೈವಿಧ್ಯತೆಗಳನ್ನು ವೈಚಿತ್ರಗಳನ್ನು ಅವುಗಳ ನಿಗೂಢ ಜೀವನ ಕ್ರಮಗಳನ್ನು ಹಾಗೂ ಅವುಗಳೆಲ್ಲಾ ಅಳಿವಿನಂಚೆಗೆ ಹೋಗುತ್ತಿರುವ ಭೀಕರತೆಗಳನ್ನೆಲ್ಲ ಜಗತ್ತಿನ ಎಲ್ಲ ಜನಗಳು ಅವರವರ ಮಾತೃಭಾಷೆಗಳಲ್ಲಿ ಅರಿತುಕೊಳ್ಳುವ ಅನಿವಾರ್ಯತೆ ಇದೆ. ಆದರೆ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ಕನ್ನಡ ಭಾಷೆಯಲ್ಲಿ ಪ್ರಸಾರವಾಗದೇ ಇರುವುದರಿಂದ ಅದರಲ್ಲಿ ಜೀವ ವೈವಿಧ್ಯದ ಜ್ಞಾನ ಕನ್ನಡಿಗರನ್ನು ತಲುಪುತ್ತಿಲ್ಲ. ಆದ್ದರಿಂದ ಅನಿಮಲ್ ಪ್ಲಾನೆಟ್, ನೆಟ್ ಜಿಯೋ ವೈಲ್ಡ್ ಹಾಗೂ ಬಿಬಿಸಿ ಅರ್ಥ್ ವಾಹಿನಿಗಳು ಕನ್ನಡದಲ್ಲಿ ಪ್ರಸಾರವಾಗಬೇಕೆಂದು ಕನ್ನಡಿಗರು ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ಒತ್ತಾಯಿಸುತ್ತಿದ್ದಾರೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಸುನಿಲ್ ಕುಮಾರ್ ಅವರು ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವರಾದ ಅನುರಾಗ್ ಸಿಂಗ್ ಠಾಕೂರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...