Friday, February 6, 2026
Friday, February 6, 2026

ಜೆಸಿಐ ವಲಯ ನೂತನ ಅಧ್ಯಕ್ಷರಾಗಿ ಅನುಷ್ ಗೌಡ,ಉಪಾಧ್ಯಕ್ಷರಾಗಿ ಸತೀಶ್ ಚಂದ್ರ ಆಯ್ಕೆ

Date:

ಜೆಸಿಐ ವಲಯದ 2023ನೇ ಸಾಲಿನ ನೂತನ ವಲಯ ಅಧ್ಯಕ್ಷರಾಗಿ ಅನುಷ್ ಗೌಡ ಹಾಗೂ ವಲಯ ಉಪಾಧ್ಯಕ್ಷರಾಗಿ ಸತೀಶ್ ಚಂದ್ರ ಆಯ್ಕೆಯಾಗಿದ್ದಾರೆ.

ಜೆಸಿಐ ಅಂತರಾಷ್ಟ್ರೀಯ ಸಂಸ್ಥೆಯ ವಲಯ 24ರ ವಲಯ ಸಮ್ಮೇಳನವನ್ನು ದಾವಣಗೆರೆಯಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಲಯ ಅಧ್ಯಕ್ಷ ಹಾಗೂ ವಲಯ ಉಪಾಧ್ಯಕ್ಷರ ಚುನಾವಣೆಯಲ್ಲಿ ಅತಿ ಹೆಚ್ಚಿನ ಮತಗಳಿಂದ ಜಯಗಳಿಸಿ 2023 ನೇ ಸಾಲಿನ ವಲಯ ಅಧ್ಯಕ್ಷ
ಹಾಗೂ ವಲಯ ಉಪಾಧ್ಯಕ್ಷರ ಆಯ್ಕೆ ನಡೆಯಿತು.

ಜೆಸಿಐ ವಲಯದ 2023ನೇ ಸಾಲಿನ ನೂತನ ವಲಯ ಅಧ್ಯಕ್ಷ ಅನುಷ್ ಗೌಡ ಹಾಗೂ ವಲಯ ಉಪಾಧ್ಯಕ್ಷ ಸತೀಶ್ ಚಂದ್ರ ಅವರಿಗೆ ಮಂಜುನಾಥ್ ಕದಂ, ಕಿಶೋರ್ ಕುಮಾರ್, ವಸಂತ ಹೋಬಳಿದಾರ್, ಜಿ.ವಿಜಯಕುಮಾರ್, ರವೀಂದ್ರನಾಥ ಐತಾಳ್, ಡಾ. ಗುಡದಪ್ಪ ಕಸಬಿ, ಸುರೇಂದ್ರ ಕೋಟ್ಯಾನ್, ಶೇಷಗಿರಿ ಡಿ ಕೆ, ಶುಭಂ ಹೋಟೆಲ್ ಮಾಲೀಕರಾದ ಚಂದ್ರಹಾಸ್ ಶೆಟ್ಟಿ, ಉದಯ ಕದಂಬ, ಹರೀಶ್, ಈಶ್ವರ್, ಸಂತೋಷ್ ಕುಮಾರ್ ಹಾಗೂ ಜೆಸಿಐ ಸಹ್ಯಾದ್ರಿ ಅಧ್ಯಕ್ಷೆ ಸುಷ್ಮಾ, ಕಾರ್ಯದರ್ಶಿ ಡಾ. ಲಲಿತಾ, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಸುಮತಿ ಜಿ ಕುಮಾರಸ್ವಾಮಿ ಹಾಗೂ ಕಾರ್ಯದರ್ಶಿ ಕುಮಾರಸ್ವಾಮಿ, ಎಲ್ಲಾ ಸದಸ್ಯರು ಹಾಗೂ ಜೆಸಿಐ ಶಿವಮೊಗ್ಗ ಸಹ್ಯಾದ್ರಿಯ ಸಂಸ್ಥೆಯ ಎಲ್ಲಾ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಜೆಸಿಐ ಸಂಸ್ಥೆಯು ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಮಾಜಮುಖಿ ಹಾಗೂ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದೆ.

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಮಹತ್ತರ ಸೇವೆ ಸಲ್ಲಿಸುತ್ತಿದೆ. ಮುಂದಿನ ವರ್ಷದಲ್ಲಿಯೂ ವಲಯ ಮಟ್ಟದಲ್ಲಿ ಉತ್ತಮ ಸೇವಾ ಕಾರ್ಯಗಳನ್ನು ನಡೆಸಲಿ ಎಂದು ಶುಭಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...