Saturday, March 28, 2026
Saturday, March 28, 2026

ವಕ್ಫ್ ಮಂಡಳಿ ತೀರ್ಮಾನ ಒಳ್ಳೆಯ ಬೆಳವಣಿಗೆಯಲ್ಲ- ಇಬ್ರಾಹಿಂ

Date:

ರಾಜ್ಯದಲ್ಲಿ ಎಲ್ಲ ವರ್ಗಗಳ ಹಿತಕ್ಕಾಗಿ ವಿದ್ಯಾದಾನವನ್ನು ಮಾಡುವ ನಿಟ್ಟಿನಲ್ಲಿ ಸರಕಾರ ಆಲೋಚನೆ ಮಾಡಬೇಕು. ಹಿಂದೂಗಳಿಗೊಂದು, ಮುಸ್ಲಿಮರಿಗಾಗಿ ಪ್ರತ್ಯೇಕವಾಗಿ ಕಾಲೇಜು ಮಾಡ್ತಾರೇನು?
ಬಿಜೆಪಿಗರ ತಲೆ ಸರಿಯಾಗಿ ಓಡುತ್ತಿಲ್ಲ, ವಕ್ಫ್ ಬೋರ್ಡ್ ತೀರ್ಮಾನ ಒಳ್ಳೆಯ ಬೆಳೆವಣಿಗೆಯಲ್ಲ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಕ್ಫ್ ಬೋರ್ಡ್ ನಿರ್ಧಾರದ ಹಿಂದೆ ಸರಕಾರದ ದೂರದೃಷ್ಟಿ ಇದೆ. ಇದರಿಂದ ಎರಡೂ ವ್ಯವಸ್ಥೆಗಳನ್ನು ಹುಟ್ಟುಹಾಕುವ ಆ ಮೂಲಕ ಶಿಕ್ಷಣದ ಹಕ್ಕಿನಿಂದ ಕೆಲವು ವರ್ಗವನ್ನು ವಂಚಿಸುವ ಕೆಲಸ ನಡೆದಿದೆ ಎಂದರು.

ಅ. 5 ತಿಂಗಳಲ್ಲಿ ಬಿಜೆಪಿ ಸರಕಾರ ಬಿದ್ದು ಹೋಗುತ್ತದೆ. ಇವರೇನು ಕಾಲೇಜು ಆರಂಭಿಸುತ್ತಾರೆ. ನಾವು ಅಧಿಕಾರಕ್ಕೆ ಬಂದ ಬಳಿಕ ಕಾಲೇಜು ಆರಂಭಿಸುತ್ತೇವೆ. ಆದರೆ, ಅದು ಎಲ್ಲ ವರ್ಗಗಳಿಗೆ, ಬಡ ಮಕ್ಕಳಿಗೆ ಶಿಕ್ಷಣ ನೀಡುವಂತಹ ಕಾಲೇಜು ಆಗಿರಲಿದೆ ಎಂದ ಅವರು, ಹೋಬಳಿ ಮಟ್ಟಕ್ಕೆ ಒಂದು ಕಾಲೇಜು ಮಾಡುವುದು ನಮ್ಮ ಉದ್ದೇಶವಾಗಿದೆ ಎಂದರು.

ನಮ್ಮ ಪಕ್ಷದಲ್ಲಿ ಡಿಸೆಂಬರ್‌ನಲ್ಲಿ ಮೊದಲ ಹಂತದ ಟಿಕೆಟ್‌ ಘೋಷಣೆಯಾಗಲಿದೆ. ಎಲ್ಲ ತೀರ್ಮಾನಗಳನ್ನು ದೇವೇಗೌಡರು ಕೈಗೊಳ್ಳುತ್ತಾರೆ. ಅವರು ಹಿರಿಯ ಯಜಮಾನರಿದ್ದಾರೆ. ಅವರ ತೀರ್ಮಾನಗಳೇ ಅಂತಿಮ. ಅವರು ಸಾಕಷ್ಟು ಅನುಭವ ಮತ್ತು ದೂರದೃಷ್ಟಿ ಹೊಂದಿದ್ದಾರೆ ಎಂದರು.

ಮುಖ್ಯ ಮಂತ್ರಿ ಅಭ್ಯರ್ಥಿ ಕುಮಾರಸ್ವಾಮಿ ಅವರೇ, ಅದರಲ್ಲಿ ಬದಲಿಲ್ಲ. ಇನ್ನುಳಿದಂತೆ ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ.
ನನ್ನ ಪುತ್ರ ಹುಮನಬಾದ್‌ನಲ್ಲಿ ಸ್ಪರ್ಧಿಸುವ ಕುರಿತು ಪಕ್ಷವೇ ತೀರ್ಮಾನಿಸಲಿದೆ ಎಂದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa 2026-27 ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ದಾಖಲಾಗುವ ಮಕ್ಕಳ ವಯೋಮಿತಿಯಲ್ಲಿ 60 ದಿನ ಸಡಿಲಿಕೆ- ಮಧು ಬಂಗಾರಪ್ಪ.

Madhu Bangarappa “ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಆರು ವರ್ಷ ತುಂಬಿರಲೇಬೇಕು...

MADHU BANGARAPPA ಶಿಕ್ಷಣದಲ್ಲಿ ಹಿಂದಿ ಹೇರಿಕೆ ವಿರೋಧ ಮತ್ತು ‘ಪಾಸ್ ವಿಥೌಟ್ ಹಿಂದಿ’ ಜಾರಿ ಕುರಿತು ಚರ್ಚೆ

MADHU BANGARAPPA ರಾಜ್ಯದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಮಂತ್ರಿಗಳಾದ ಮಧುಬಂಗಾರಪ್ಪ...

Morarji Desai Residential School ಜಿಲ್ಲೆಯ ಮೊರಾರ್ಜಿ ದೇಸಾಯಿ‌ ವಸತಿ ಶಾಲೆ 6 ನೆ ತರಗತಿಗೆ ಪ್ರವೇಶ ಪರೀಕ್ಷೆ.

Morarji Desai Residential School ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ...

Mylaralingeshwara Temple Shimoga ಮಾರ್ಚ್ 29. ಮೈಲಾರೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

Mylaralingeshwara Temple in Shimoga ಶಿವಮೊಗ್ಗ ನಗರದಲ್ಲಿನ ಶ್ರೀ ಮೈಲಾರೇಶ್ವರ ದೇವಸ್ಥಾನನಲ್ಲಿ...