Sunday, December 7, 2025
Sunday, December 7, 2025

ವಕ್ಫ್ ಮಂಡಳಿ ತೀರ್ಮಾನ ಒಳ್ಳೆಯ ಬೆಳವಣಿಗೆಯಲ್ಲ- ಇಬ್ರಾಹಿಂ

Date:

ರಾಜ್ಯದಲ್ಲಿ ಎಲ್ಲ ವರ್ಗಗಳ ಹಿತಕ್ಕಾಗಿ ವಿದ್ಯಾದಾನವನ್ನು ಮಾಡುವ ನಿಟ್ಟಿನಲ್ಲಿ ಸರಕಾರ ಆಲೋಚನೆ ಮಾಡಬೇಕು. ಹಿಂದೂಗಳಿಗೊಂದು, ಮುಸ್ಲಿಮರಿಗಾಗಿ ಪ್ರತ್ಯೇಕವಾಗಿ ಕಾಲೇಜು ಮಾಡ್ತಾರೇನು?
ಬಿಜೆಪಿಗರ ತಲೆ ಸರಿಯಾಗಿ ಓಡುತ್ತಿಲ್ಲ, ವಕ್ಫ್ ಬೋರ್ಡ್ ತೀರ್ಮಾನ ಒಳ್ಳೆಯ ಬೆಳೆವಣಿಗೆಯಲ್ಲ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಕ್ಫ್ ಬೋರ್ಡ್ ನಿರ್ಧಾರದ ಹಿಂದೆ ಸರಕಾರದ ದೂರದೃಷ್ಟಿ ಇದೆ. ಇದರಿಂದ ಎರಡೂ ವ್ಯವಸ್ಥೆಗಳನ್ನು ಹುಟ್ಟುಹಾಕುವ ಆ ಮೂಲಕ ಶಿಕ್ಷಣದ ಹಕ್ಕಿನಿಂದ ಕೆಲವು ವರ್ಗವನ್ನು ವಂಚಿಸುವ ಕೆಲಸ ನಡೆದಿದೆ ಎಂದರು.

ಅ. 5 ತಿಂಗಳಲ್ಲಿ ಬಿಜೆಪಿ ಸರಕಾರ ಬಿದ್ದು ಹೋಗುತ್ತದೆ. ಇವರೇನು ಕಾಲೇಜು ಆರಂಭಿಸುತ್ತಾರೆ. ನಾವು ಅಧಿಕಾರಕ್ಕೆ ಬಂದ ಬಳಿಕ ಕಾಲೇಜು ಆರಂಭಿಸುತ್ತೇವೆ. ಆದರೆ, ಅದು ಎಲ್ಲ ವರ್ಗಗಳಿಗೆ, ಬಡ ಮಕ್ಕಳಿಗೆ ಶಿಕ್ಷಣ ನೀಡುವಂತಹ ಕಾಲೇಜು ಆಗಿರಲಿದೆ ಎಂದ ಅವರು, ಹೋಬಳಿ ಮಟ್ಟಕ್ಕೆ ಒಂದು ಕಾಲೇಜು ಮಾಡುವುದು ನಮ್ಮ ಉದ್ದೇಶವಾಗಿದೆ ಎಂದರು.

ನಮ್ಮ ಪಕ್ಷದಲ್ಲಿ ಡಿಸೆಂಬರ್‌ನಲ್ಲಿ ಮೊದಲ ಹಂತದ ಟಿಕೆಟ್‌ ಘೋಷಣೆಯಾಗಲಿದೆ. ಎಲ್ಲ ತೀರ್ಮಾನಗಳನ್ನು ದೇವೇಗೌಡರು ಕೈಗೊಳ್ಳುತ್ತಾರೆ. ಅವರು ಹಿರಿಯ ಯಜಮಾನರಿದ್ದಾರೆ. ಅವರ ತೀರ್ಮಾನಗಳೇ ಅಂತಿಮ. ಅವರು ಸಾಕಷ್ಟು ಅನುಭವ ಮತ್ತು ದೂರದೃಷ್ಟಿ ಹೊಂದಿದ್ದಾರೆ ಎಂದರು.

ಮುಖ್ಯ ಮಂತ್ರಿ ಅಭ್ಯರ್ಥಿ ಕುಮಾರಸ್ವಾಮಿ ಅವರೇ, ಅದರಲ್ಲಿ ಬದಲಿಲ್ಲ. ಇನ್ನುಳಿದಂತೆ ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ.
ನನ್ನ ಪುತ್ರ ಹುಮನಬಾದ್‌ನಲ್ಲಿ ಸ್ಪರ್ಧಿಸುವ ಕುರಿತು ಪಕ್ಷವೇ ತೀರ್ಮಾನಿಸಲಿದೆ ಎಂದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...