Sunday, April 19, 2026
Sunday, April 19, 2026

ದೇಹದ ಆರೋಗ್ಯ ರಕ್ಷಣೆಯಲ್ಲಿ ದಾಳಿಂಬೆ ಫಲ

Date:

ದಾಳಿಂಬೆ ಹಣ್ಣಿನ ಸೇವನೆಯಿಂದ ನಮ್ಮ ದೇಹಕ್ಕೆ ಹಲವು ಪೋಷಕಾಂಶಗಳು ಸಿಗುತ್ತವೆ ಮತ್ತು ಈ ಹಣ್ಣಿಗೆ ಮಲಬದ್ಧತೆ ನಿವಾರಿಸುವ ಶಕ್ತಿ ಇದೆ ಎಂಬುದು ನಿಮಗೆಲ್ಲಾ ತಿಳಿದೇ ಇದೆ.

ಈ ಹಣ್ಣಿನ ಎಲೆಗಳಿಂದಲೂ ಹಲವು ಪ್ರಯೋಜನಗಳಿವೆ ಎಂಬುದು ನಿಮಗೆ ತಿಳಿದಿದೆಯೇ.?
ಆಯುರ್ವೇದದಲ್ಲಿ ದಾಳಿಂಬೆ ಗಿಡದ ಎಲೆಗಳನ್ನೂ ಮದ್ದಾಗಿ ಬಳಸಲಾಗುತ್ತದೆ.
ಚಿಕ್ಕದಾಗಿರುವ ಇದರ ಎಲೆಗಳಿಂದ ರಸ ಹಿಂಡುವುದು ಪ್ರಯಾಸದ ಕೆಲಸವೂ ಹೌದು.

ಕಾಮಾಲೆ, ಹೊಟ್ಟೆನೋವು, ನಿದ್ರಾಹೀನತೆ ಮೊದಲಾದ ರೋಗಗಳಿಗೆ ಚಿಕಿತ್ಸೆ ನೀಡಲು ಇದನ್ನು ಬಳಸಲಾಗುತ್ತದೆ.
ಮಾಮೂಲಿ ಕೆಮ್ಮು ಮತ್ತು ಶೀತದ ನಿವಾರಣೆಗೆ ದಾಳಿಂಬೆ ಎಲೆಗಳನ್ನು ಕುದಿಸಿ, ಸೋಸಿ ತಣಿಸಿ ಸಂಗ್ರಹಿಸಿಡಿ.

ದಿನಕ್ಕೆ ಎರಡರಿಂದ ಮೂರು ಬಾರಿ ಕುಡಿಯುವುದರಿಂದ ಕೆಮ್ಮಿನೊಂದಿಗೆ ಕಫದ ಸಮಸ್ಯೆಯೂ ದೂರವಾಗುತ್ತದೆ.
ನಿದ್ರಾಹೀನತೆ ಸಮಸ್ಯೆಯನ್ನೂ ಇದು ನಿವಾರಿಸುತ್ತದೆ. ತುರಿಕೆ ಸಮಸ್ಯೆಯನ್ನೂ ಇದು ದೂರ ಮಾಡುತ್ತದೆ.

ದಾಳಿಂಬೆ ಎಲೆಗಳನ್ನು ನುಣ್ಣಗೆ ಅರೆದು ದಪ್ಪನೆಯ ಲೇಹಕ್ಕೆ ತುಸುವೇ ಅರಿಶಿನ ಉದುರಿಸಿ ತುರಿಕೆ ಇರುವಲ್ಲಿಗೆ ಲೇಪಿಸಿಕೊಳ್ಳಿ. ತುರಿಕೆ ಮತ್ತು ಉರಿಯಿಂದ ಇದು ಮುಕ್ತಿ ನೀಡುತ್ತದೆ. ದಿನಕ್ಕೆರಡು ಬಾರಿ ಬಳಸಿ. ಹಚ್ಚುವ ಮುನ್ನ ಉಪ್ಪು ನೀರಿನಲ್ಲಿ ಆ ಭಾಗವನ್ನು ತೊಳೆದುಕೊಳ್ಳಿ. ಯಾವುದೇ ಕಾರಣಕ್ಕೂ ಉಗುರನ್ನು ತಾಗಿಸದಿರಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್...

MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ...