Thursday, May 14, 2026
Thursday, May 14, 2026

ಸುಂದರ್ ಪಿಚೈ ಅವರಿಗೆ ಭಾರತದ ರಾಯಭಾರಿ ಮೂಲಕ ಪದ್ಮಭೂಷಣ ಪ್ರಶಸ್ತಿ ಸನ್ಮಾನ

Date:

ಗೂಗಲ್‌ ಹಾಗೂ ಅಲ್ಫಾಬೆಟ್‌ ಸಿಇಒ ಆಗಿರುವ ಸುಂದರ್‌ ಪಿಚೈ ಅವರಿಗೆ ಪ್ರತಿಷ್ಠಿತ ಪದ್ಮ ಭೂಷಣ ಪ್ರಶಸ್ತಿ ನೀಡಿ ಶುಕ್ರವಾರ ಗೌರವಿಸಲಾಗಿದೆ.

2022ನೇ ಸಾಲಿನ ಪದ್ಮ ಭೂಷಣ ಪ್ರಶಸ್ತಿಗೆ ಆಯ್ಕೆಯಾದವರಲ್ಲಿ ಮಧುರೈ ಮೂಲದ ಸುಂದರ್‌ ಪಿಚೈ ಕೂಡಾ ಒಬ್ಬರು.

ಈ ಹಿನ್ನೆಲೆಯಲ್ಲಿ ಅಮೆರಿಕದ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ಭಾರತದ ರಾಯಭಾರಿ ತರಣ್‌ಜಿತ್‌ ಸಿಂಗ್‌ ಸಂಧು ಅವರು ದೇಶದ 3ನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ಭೂಷಣ ಪ್ರಶಸ್ತಿಯನ್ನು ಸುಂದರ್‌ ಪಿಚೈ ಅವರಿಗೆ ನೀಡಿ ಸನ್ಮಾನಿಸಿದರು.

ಈ ವೇಳೆ ಮಾತನಾಡಿದ ಪಿಚೈ,’ನಾನು ಈ ಗೌರವ ನೀಡಿದ್ದಕ್ಕೆ ಭಾರತ ಸರ್ಕಾರ ಹಾಗೂ ಭಾರತೀಯರಿಗೆ ಆಭಾರಿಯಾಗಿರುತ್ತೇನೆ. ನನ್ನನ್ನು ರೂಪಿಸಿದ ದೇಶದಿಂದ ಹೀಗೆ ಗೌರವಿಸಲ್ಪಡುವುದು ನನಗೆ ಅತ್ಯಂತ ಸಂತೋಷ ನೀಡಿದೆ. ಭಾರತವು ನನ್ನ ಭಾಗವಾಗಿದೆ. ನಾನೆಲ್ಲೇ ಹೋದರೂ ಅದು ನನ್ನೊಂದಿಗೆ ಇರುತ್ತದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ

Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು...

Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ...

Royal Diamond English Medium School ಮನೆಯೇ ಮೊದಲ ಪಾಠಶಾಲೆ.ತಾಯಿಯೇ ಮೊದಲ ಗುರು- ವೀಣಾ ನಾಯಕ್

Royal Diamond English Medium School ಸಿರಿಗನ್ನಡ ವೇದಿಕೆ, ಮಹಿಳಾ...

Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ

Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ...