Monday, March 30, 2026
Monday, March 30, 2026

ಶಿವಮೊಗ್ಗದಲ್ಲಿ ಡಾ.ಧನಂಜಯ ಸರ್ಜಿ,ಸಾಗರದಪ್ರಶಾಂತ್ ಬಿಜೆಪಿ ಸೇರ್ಪಡೆ

Date:

ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳಿದ್ದಾಗಲೇ ಶಿವಮೊಗ್ಗ ಬಿಜೆಪಿ ಕೆಲಸ ಆರಂಭಿಸಿದೆ. ಸೊರಬ, ಶಿಕಾರಿಪುರ ಬಳಿಕ ಸಾಗರ ಹಾಗೂ ಶಿವಮೊಗ್ಗ ಕ್ಷೇತ್ರದ ಪ್ರಮುಖರು ಬಿಜೆಪಿಗೆ ಸೇರ್ಪಡೆಯಾಗಿದ್ದು, ಚುನಾವಣಾ ತಂತ್ರಗಾರಿಕೆ ಅಧಿಕೃತವಾಗಿ ಆರಂಭವಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಗರದ ಕೆ.ಎಸ್.ಪ್ರಶಾಂತ್ ಹಾಗೂ ಖ್ಯಾತ ಮಕ್ಕಳ ತಜ್ಞ ಡಾ ಧನಂಜಯ್ ಸರ್ಜಿ ಬಿಜೆಪಿಗೆ ಸೇರ್ಪಡೆಯಾದರು.

ಮಾಜಿ ಸಂಸದ ಕೆ.ಜಿ.ಶಿವಪ್ಪ ಅವರ ಪುತ್ರ, ಸಾಗರದ ಯುವ ಮುಖಂಡರಾಗಿರುವ ಕೆ.ಎಸ್.‌ಪ್ರಶಾಂತ್ ಈ ಹಿಂದೆ ರಾಜಕೀಯವಾಗಿ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು. ತನ್ನದೇ ಸಂಘಟನೆ ಮೂಲಕ ಸಾಮಾಜಿಕ ಚಟುವಟಿಕೆ ಮಾಡುತ್ತಿದ್ದ ಕೆ.ಎಸ್.ಪ್ರಶಾಂತ್ ಸೇರ್ಪಡೆ ಸಾಗರ ಭಾಗದಲ್ಲಿ ಬಿಜೆಪಿಗೆ ಬಲ ತುಂಬಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಶಿವಮೊಗ್ಗ ನಗರದ ಖ್ಯಾತ ಮಕ್ಕಳ ತಜ್ಞರಾಗಿರುವ ಡಾ.ಧನಂಜಯ್ ಸರ್ಜಿ ಅವರು ಸಾಮಾಜಿಕ ಕಾರ್ಯಕ್ರಮದ ಶಿವಮೊಗ್ಗದಲ್ಲಿ ಗುರುತಿಸಿಕೊಂಡಿದ್ದಾರೆ.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಇವರುಗಳು ಬಿಜೆಪಿ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಶಾಸಕರಾದ ಆಯನೂರು ಮಂಜುನಾಥ್, ಡಿ.ಎಸ್.ಅರುಣ್, ಎಸ್.ರುದ್ರೇಗೌಡ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ತೇರಿನ ನಡುವೆ ಮೆರೆದ ಹೆತ್ತ ತಾಯಿಯ ಮೇಲಿನ ಮಮತೆ.ಲೇ: ಡಾ.ಹೆಚ್.ಬಿ.ಮಂಜುನಾಥ್.

ಜೀವನೋತ್ಸಾಹ ಹಾಗೂ ಹಿರಿಯರಲ್ಲಿ ಪ್ರೀತಿ ವಾತ್ಸಲ್ಯ ಹೇಗಿರಬೇಕು ಎಂಬುದಕ್ಕೆ ಇದೊಂದು ಹೃದಯಸ್ಪರ್ಶಿ...

CM Siddharamaih ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 8000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು,- ಸಿದ್ಧರಾಮಯ್ಯ.

CM Siddharamaih ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ....

Kuvempu University ಜೋನ್ ಲೀಲಾ ಮಾಡ್ತಾ ಅವರಿಗೆ ಪಿಎಚ್.ಡಿ. ಪದವಿ

Kuvempu University  ಎನ್.ಶಾಂತನಾಯ್ಕ ಮಾರ್ಗದರ್ಶನದಲ್ಲಿ ಜೋನ್ ಲೀಲಾ ಮಾಡ್ತಾ ಕಲಾ ಅಧ್ಯಯನ...