Tuesday, August 25, 2026
Tuesday, August 25, 2026

ಶಿವಮೊಗ್ಗದಲ್ಲಿ ಡಾ.ಧನಂಜಯ ಸರ್ಜಿ,ಸಾಗರದಪ್ರಶಾಂತ್ ಬಿಜೆಪಿ ಸೇರ್ಪಡೆ

Date:

ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳಿದ್ದಾಗಲೇ ಶಿವಮೊಗ್ಗ ಬಿಜೆಪಿ ಕೆಲಸ ಆರಂಭಿಸಿದೆ. ಸೊರಬ, ಶಿಕಾರಿಪುರ ಬಳಿಕ ಸಾಗರ ಹಾಗೂ ಶಿವಮೊಗ್ಗ ಕ್ಷೇತ್ರದ ಪ್ರಮುಖರು ಬಿಜೆಪಿಗೆ ಸೇರ್ಪಡೆಯಾಗಿದ್ದು, ಚುನಾವಣಾ ತಂತ್ರಗಾರಿಕೆ ಅಧಿಕೃತವಾಗಿ ಆರಂಭವಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಗರದ ಕೆ.ಎಸ್.ಪ್ರಶಾಂತ್ ಹಾಗೂ ಖ್ಯಾತ ಮಕ್ಕಳ ತಜ್ಞ ಡಾ ಧನಂಜಯ್ ಸರ್ಜಿ ಬಿಜೆಪಿಗೆ ಸೇರ್ಪಡೆಯಾದರು.

ಮಾಜಿ ಸಂಸದ ಕೆ.ಜಿ.ಶಿವಪ್ಪ ಅವರ ಪುತ್ರ, ಸಾಗರದ ಯುವ ಮುಖಂಡರಾಗಿರುವ ಕೆ.ಎಸ್.‌ಪ್ರಶಾಂತ್ ಈ ಹಿಂದೆ ರಾಜಕೀಯವಾಗಿ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು. ತನ್ನದೇ ಸಂಘಟನೆ ಮೂಲಕ ಸಾಮಾಜಿಕ ಚಟುವಟಿಕೆ ಮಾಡುತ್ತಿದ್ದ ಕೆ.ಎಸ್.ಪ್ರಶಾಂತ್ ಸೇರ್ಪಡೆ ಸಾಗರ ಭಾಗದಲ್ಲಿ ಬಿಜೆಪಿಗೆ ಬಲ ತುಂಬಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಶಿವಮೊಗ್ಗ ನಗರದ ಖ್ಯಾತ ಮಕ್ಕಳ ತಜ್ಞರಾಗಿರುವ ಡಾ.ಧನಂಜಯ್ ಸರ್ಜಿ ಅವರು ಸಾಮಾಜಿಕ ಕಾರ್ಯಕ್ರಮದ ಶಿವಮೊಗ್ಗದಲ್ಲಿ ಗುರುತಿಸಿಕೊಂಡಿದ್ದಾರೆ.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಇವರುಗಳು ಬಿಜೆಪಿ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಶಾಸಕರಾದ ಆಯನೂರು ಮಂಜುನಾಥ್, ಡಿ.ಎಸ್.ಅರುಣ್, ಎಸ್.ರುದ್ರೇಗೌಡ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...