Tuesday, August 25, 2026
Tuesday, August 25, 2026

ಜಾಗತಿಕ ಪರಿಸ್ಥಿತಿ ಪರಿಶೀಲಿಸಿ ಬೃಹತ್ ಪ್ರಮಾಣದ ಆಹಾರ ಸಂಗ್ರಹಣಾ ಯೋಜನೆ

Date:

ದೇಶದ ನಾಗರಿಕರಿಗೆ ಅರ್ಹರಿಗೆ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಜಗತ್ತಿನಲ್ಲಿಯೇ ಅತೀ ಬೃಹತ್‌ ಪ್ರಮಾಣದ ಆಹಾರ ಸಂಗ್ರಹಣ ಯೋಜನೆ ಹಮ್ಮಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವಕೃಷಿ ಸಚಿವಾಲಯ, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಆಹಾರ ಸಂಸ್ಕರಣ ಇಲಾಖೆಗಳ ಯೋಜನೆಗಳನ್ನು ವಿಲೀನಗೊಳಿಸುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಉಕ್ರೇನ್‌ ಮೇಲೆ ರಷ್ಯಾ ನಡೆಸುತ್ತಿರುವ ದಾಳಿ, ಹೆಚ್ಚುತ್ತಿರುವ ಆಹಾರ ಉತ್ಪನ್ನಗಳ ಬೆಲೆ, ರಾಜಕೀಯ ಬೆಳವಣಿಗೆಗಳ ಏರಿಳಿತಗಳನ್ನು ಗಮನಿಸಿರುವ ಕೇಂದ್ರ ಸರಕಾರ ಈ ತೀರ್ಮಾನಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಉಕ್ರೇನ್‌ ಮೇಲಿನ ದಾಳಿಯಿಂದಾಗಿದ ಈಗಾಗಲೇ ಆಹಾರ ಪೂರೈಕೆಯ ಸರಪಳಿ ಜಗತ್ತಿನ ಕೆಲವು ಹಂತಗಳಲ್ಲಿ ತಪ್ಪಿ ಹೋಗಿ ಬೆಲೆಯ ಏರಿಕೆಗೆ ಕೂಡ ಕಾರಣವಾಗಿದೆ. ದೇಶದಲ್ಲಿ ಆಹಾರ ಧಾನ್ಯಗಳ ಸಂಗ್ರಹಣೆಗೆ ಸಾಮರ್ಥ್ಯದ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ಹೆಜ್ಜೆಗಳನ್ನು ಇರಿಸಿದೆ ಎಂದು ಕೃಷಿ ಆರ್ಥಿಕ ತಜ್ಞ ಅಶೋಕ್‌ ಗುಲಾಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...