Friday, May 15, 2026
Friday, May 15, 2026

ಕೌಶಲ್ಯಾಧಾರಿತ ಶಿಕ್ಷಣಕ್ಕೆ ಒತ್ತು -ಡಾ.ಕೆ.ಶಿವಶಂಕರ್

Date:

“ಕೌಶಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅವಶ್ಯ” -ವಾಣಿಜ್ಯೋತ್ಸವ 2022 ಉದ್ಘಾಟನೆಯಲ್ಲಿ ದಾವಣಗೆರೆ ವಿವಿ ರಿಜಿಸ್ಟಾರ್ ಡಾ. ಕೆ. ಶಿವಶಂಕರ್- ದಾವಣಗೆರೆ.ಡಿ. 3. ಆಧುನಿಕ ತಂತ್ರಜ್ಞಾನದ ಬಳಕೆಯಿಂದ ವಾಣಿಜ್ಯ ರಂಗವನ್ನು ಸರಳ ಸದೃಢ ಮತ್ತು ವ್ಯಾಪಕಗೊಳಿಸಲು ಕೌಶಲ್ಯ ಬೇಕು ಎಂದು ದಾವಣಗೆರೆ ವಿಶ್ವವಿದ್ಯಾಲಯದ ರಿಜಿಸ್ಟಾರ್ ಇವ್ಯಾಲುವೇಶನ್ ಡಾ. ಕೆ. ಶಿವಶಂಕರ್ ಅಭಿಪ್ರಾಯಪಟ್ಟರು. ಅವರಿಂದು ಬಾಪೂಜಿ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಶನ್ ನ ವಾಣಿಜ್ಯ ವಿಭಾಗದ ವತಿಯಿಂದ ಏರ್ಪಡಿಸಿದ್ದ ಅಂತರ್ ರಾಜ್ಯ ವಾಣಿಜ್ಯ ಪ್ರದರ್ಶನ ‘ವಾಣಿಜ್ಯೋತ್ಸವ 2022’ ರ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ ಸಾಂಪ್ರದಾಯಿಕವಾದ ಪಠ್ಯ ಶಿಕ್ಷಣದ ಜೊತೆಗೆ ಕೌಶಲ್ಯಾಧಾರಿತ ಶಿಕ್ಷಣಕ್ಕೂ ಒತ್ತು ಕೊಡುವ ಅವಶ್ಯಕತೆ ಇದೆ, ವಿದ್ಯಾರ್ಥಿಗಳು ಬದಲಾಗುತ್ತಿರುವ ಜಗತ್ತಿನ ಅಗತ್ಯಗಳಿಗೆ ತಕ್ಕಂತೆ ತಂತ್ರಜ್ಞಾನಗಳನ್ನು ಬಳಸಬೇಕು.

ಮೊಬೈಲ್ ಫೋನ್ ಗಳು ಸಹಾ ರಚನಾತ್ಮಕ ಕಾರ್ಯಗಳಿಗೆ ಬಳಕೆಯಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಕಾಲೇಜಿನ ಚೇರ್ಮನ್ ಅಥಣಿ ಎಸ್. ವೀರಣ್ಣನವರು ತಂತ್ರಜ್ಞಾನವು ತೀವ್ರ ಗತಿಯಲ್ಲಿ ಬದಲಾಗುತ್ತಿದ್ದು ವಿನೂತನ ಆಲೋಚನೆಗಳ ಮೂಲಕ ಅವುಗಳ ಅಳವಡಿಕೆಗೆ ವಿದ್ಯಾರ್ಥಿಗಳು ಸಿದ್ಧಪಡಿಸುವ ವಾಣಿಜ್ಯ ಮಾದರಿಗಳು ಸಹಕಾರಿಯಾಗಲಿವೆ ಎಂದರು. ಪ್ರಾಂಶುಪಾಲ ಡಾ. ಬಿ. ವೀರಪ್ಪನವರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಕಾಲೇಜಿನ ನಿರ್ದೇಶಕ ಡಾ. ಸ್ವಾಮಿ ತ್ರಿಭುವನಾನಂದ ಸ್ವಾಗತ ಕೋರುತ್ತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೂಪ ಮತ್ತು ಸಂಜನಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಪವನ್ ಹಾಡಿದರು. ಸ್ವಾತಿ ಮತ್ತು ಸೌಮ್ಯ ಮುಖ್ಯ ಅತಿಥಿಗಳ ಪರಿಚಯ ಮಾಡಿದರು. ಸಹಾಯಕ ಪ್ರಾಧ್ಯಾಪಕ ಪ್ರೊ.ಮಂಜುನಾಥ್ ಬಿ.ಬಿ.ವಂದನೆ ಸಲ್ಲಿಸಿದರು. ವಿವಿಧ ಕಾಲೇಜುಗಳಿಂದ ವಾಣಿಜ್ಯ ವಿದ್ಯಾರ್ಥಿಗಳು ಸಿದ್ಧಪಡಿಸಿಕೊಂಡು ತಂದ ಅನೇಕ ಮಾದರಿಗಳ ಪ್ರದರ್ಶನವನ್ನು ಮುಖ್ಯ ಅತಿಥಿಗಳು ವೀಕ್ಷಿಸಿದರು.

ವರದಿ ಕೃಪೆ :ಎಚ್. ಬಿ .ಮಂಜುನಾಥ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ

Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು...

Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ...

Royal Diamond English Medium School ಮನೆಯೇ ಮೊದಲ ಪಾಠಶಾಲೆ.ತಾಯಿಯೇ ಮೊದಲ ಗುರು- ವೀಣಾ ನಾಯಕ್

Royal Diamond English Medium School ಸಿರಿಗನ್ನಡ ವೇದಿಕೆ, ಮಹಿಳಾ...

Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ

Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ...