Tuesday, August 25, 2026
Tuesday, August 25, 2026

ಕೌಶಲ್ಯಾಧಾರಿತ ಶಿಕ್ಷಣಕ್ಕೆ ಒತ್ತು -ಡಾ.ಕೆ.ಶಿವಶಂಕರ್

Date:

“ಕೌಶಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅವಶ್ಯ” -ವಾಣಿಜ್ಯೋತ್ಸವ 2022 ಉದ್ಘಾಟನೆಯಲ್ಲಿ ದಾವಣಗೆರೆ ವಿವಿ ರಿಜಿಸ್ಟಾರ್ ಡಾ. ಕೆ. ಶಿವಶಂಕರ್- ದಾವಣಗೆರೆ.ಡಿ. 3. ಆಧುನಿಕ ತಂತ್ರಜ್ಞಾನದ ಬಳಕೆಯಿಂದ ವಾಣಿಜ್ಯ ರಂಗವನ್ನು ಸರಳ ಸದೃಢ ಮತ್ತು ವ್ಯಾಪಕಗೊಳಿಸಲು ಕೌಶಲ್ಯ ಬೇಕು ಎಂದು ದಾವಣಗೆರೆ ವಿಶ್ವವಿದ್ಯಾಲಯದ ರಿಜಿಸ್ಟಾರ್ ಇವ್ಯಾಲುವೇಶನ್ ಡಾ. ಕೆ. ಶಿವಶಂಕರ್ ಅಭಿಪ್ರಾಯಪಟ್ಟರು. ಅವರಿಂದು ಬಾಪೂಜಿ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಶನ್ ನ ವಾಣಿಜ್ಯ ವಿಭಾಗದ ವತಿಯಿಂದ ಏರ್ಪಡಿಸಿದ್ದ ಅಂತರ್ ರಾಜ್ಯ ವಾಣಿಜ್ಯ ಪ್ರದರ್ಶನ ‘ವಾಣಿಜ್ಯೋತ್ಸವ 2022’ ರ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ ಸಾಂಪ್ರದಾಯಿಕವಾದ ಪಠ್ಯ ಶಿಕ್ಷಣದ ಜೊತೆಗೆ ಕೌಶಲ್ಯಾಧಾರಿತ ಶಿಕ್ಷಣಕ್ಕೂ ಒತ್ತು ಕೊಡುವ ಅವಶ್ಯಕತೆ ಇದೆ, ವಿದ್ಯಾರ್ಥಿಗಳು ಬದಲಾಗುತ್ತಿರುವ ಜಗತ್ತಿನ ಅಗತ್ಯಗಳಿಗೆ ತಕ್ಕಂತೆ ತಂತ್ರಜ್ಞಾನಗಳನ್ನು ಬಳಸಬೇಕು.

ಮೊಬೈಲ್ ಫೋನ್ ಗಳು ಸಹಾ ರಚನಾತ್ಮಕ ಕಾರ್ಯಗಳಿಗೆ ಬಳಕೆಯಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನದಿಂದ ಮಾತನಾಡಿದ ಕಾಲೇಜಿನ ಚೇರ್ಮನ್ ಅಥಣಿ ಎಸ್. ವೀರಣ್ಣನವರು ತಂತ್ರಜ್ಞಾನವು ತೀವ್ರ ಗತಿಯಲ್ಲಿ ಬದಲಾಗುತ್ತಿದ್ದು ವಿನೂತನ ಆಲೋಚನೆಗಳ ಮೂಲಕ ಅವುಗಳ ಅಳವಡಿಕೆಗೆ ವಿದ್ಯಾರ್ಥಿಗಳು ಸಿದ್ಧಪಡಿಸುವ ವಾಣಿಜ್ಯ ಮಾದರಿಗಳು ಸಹಕಾರಿಯಾಗಲಿವೆ ಎಂದರು. ಪ್ರಾಂಶುಪಾಲ ಡಾ. ಬಿ. ವೀರಪ್ಪನವರು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಕಾಲೇಜಿನ ನಿರ್ದೇಶಕ ಡಾ. ಸ್ವಾಮಿ ತ್ರಿಭುವನಾನಂದ ಸ್ವಾಗತ ಕೋರುತ್ತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೂಪ ಮತ್ತು ಸಂಜನಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಪವನ್ ಹಾಡಿದರು. ಸ್ವಾತಿ ಮತ್ತು ಸೌಮ್ಯ ಮುಖ್ಯ ಅತಿಥಿಗಳ ಪರಿಚಯ ಮಾಡಿದರು. ಸಹಾಯಕ ಪ್ರಾಧ್ಯಾಪಕ ಪ್ರೊ.ಮಂಜುನಾಥ್ ಬಿ.ಬಿ.ವಂದನೆ ಸಲ್ಲಿಸಿದರು. ವಿವಿಧ ಕಾಲೇಜುಗಳಿಂದ ವಾಣಿಜ್ಯ ವಿದ್ಯಾರ್ಥಿಗಳು ಸಿದ್ಧಪಡಿಸಿಕೊಂಡು ತಂದ ಅನೇಕ ಮಾದರಿಗಳ ಪ್ರದರ್ಶನವನ್ನು ಮುಖ್ಯ ಅತಿಥಿಗಳು ವೀಕ್ಷಿಸಿದರು.

ವರದಿ ಕೃಪೆ :ಎಚ್. ಬಿ .ಮಂಜುನಾಥ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...