Sunday, December 14, 2025
Sunday, December 14, 2025

2047 ರ ಹೊತ್ತಿಗೆ ಭಾರತ ವಿಶ್ವಗುರು ಆಗಲಿದೆ- ದ್ರೌಪದಿ ಮುರ್ಮು

Date:

ಭಾರತವು ತನ್ನ ಸ್ವಾತಂತ್ರ್ಯ ಶತಮಾನೋತ್ಸವ ಆಚರಿಸಿಕೊಳ್ಳುವ ಹೊತ್ತಿಗೆ ವಿಶ್ವ ಗುರು ಆಗಲಿದೆ. ಆ ಮೂಲಕ ಪ್ರಾಚೀನ ಭಾರತದ ಗೌರವ ಮರಳಿ ಪಡೆಯಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದರು. ವಿಶಾಖಪಟ್ಟಣದ ರಾಮಕೃಷ್ಣ ಬೀಚ್‌ನಲ್ಲಿ ಏರ್ಪಡಿಸಿದ್ದ ನೌಕಾ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತವನ್ನು ಶ್ರೇಷ್ಠ ರಾಷ್ಟ್ರ ಎಂದು ಗುರುತಿಸಲಾಗುತ್ತದೆ.

ಯಾಕೆಂದರೆ, ಅಂಥ ಶಕ್ತಿ ಭಾರತದಲ್ಲಿ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಸಂಗೀತ, ಕ್ರೀಡೆ, ಸಂಸ್ಕೃತಿ, ಸೇನೆ ಸೇರಿದಂತೆ ಎಲ್ಲದರಲ್ಲೂ ಭಾರತೀಯ ಶಕ್ತಿವಂತರಾಗಿದ್ದಾರೆ. ಪ್ರತಿಯೊಬ್ಬರು ಭಾರತವನ್ನು ಅಭಿವೃದ್ಧಿಪಥದಲ್ಲಿ ಕೊಂಡೊಯ್ಯಲು ಕೆಲಸ ಮಾಡುತ್ತಿದ್ದಾರೆ. ಭಾರತವು ತನ್ನ ಸ್ವಾತಂತ್ರ್ಯದ ಶತಮಾನೋತ್ಸವನ್ನು ಆಚರಿಸಿಕೊಳ್ಳುವ ಹೊತ್ತಿಗೆ ವಿಶ್ವ ಗುರುವಾಗಲಿದೆ ಎಂಬ ವಿಶ್ವಾಸವು ನನಗೆ ಇದೆ ಎಂದು ದ್ರೌಪದಿ ಮುರ್ಮು ಅವರು ಹೇಳಿದರು.

ಭಾರತವು ಮೂರು ಕಡೆ ಸಮುದ್ರ ಮತ್ತು ಮತ್ತೊಂದು ಕಡೆ ಎತ್ತರದ ಪ್ರರ್ವತ ಶ್ರೇಣೆಯನ್ನು ಹೊಂದಿದೆ. ಹಾಗಾಗಿ ಇದೊಂದು ಅಂತರ್ಗತವಾಗಿಯೇ ಕಡಲ ರಾಷ್ಟ್ರವಾಗಿದೆ. ದೇಶದ ಬೆಳವಣಿಗೆ ಮತ್ತು ಅಭಿವೃದ್ಧಿಯಲ್ಲಿ ಸಾಗರಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಭಾರತದ ಸಾಗರಗಳ ಗಡಿ ಸುರಕ್ಷತೆಯನ್ನು ಭಾರತೀಯ ನೌಕಾ ಪಡೆ ನಿರ್ವಹಿಸುತ್ತಿದೆ ಎಂದು ಅವರು ಇದೇ ವೇಳೆ ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...