Monday, December 15, 2025
Monday, December 15, 2025

ಮಧ್ಯಪ್ರದೇಶದಲ್ಲಿನ ವ್ಯಾಘ್ರಗಳ ಸೆರೆಗೆ ಸಕ್ರೆಬೈಲಿನ ಗಜಪಡೆ

Date:

ಶಿವಮೊಗ್ಗದ ಸಕ್ರೆಬೈಲಿನ ಆನೆ ಬಿಡಾರದಲ್ಲಿರುವ 4 ಆನೆಗಳು ಸೇರಿ 14 ಆನೆಗಳನ್ನು ಮಧ್ಯಪ್ರದೇಶಕ್ಕೆ ಕಳುಹಿಸಲು ತಯಾರಿ ನಡೆದಿದೆ.

ಮಧ್ಯಪ್ರದೇಶದಲ್ಲಿ ಹುಲಿಗಳ ಸೆರೆ ಕಾರ್ಯಾಚರಣೆಗೆ ಆನೆಗಳ ಬಳಕೆ ಮಾಡಲು ಕರ್ನಾಟಕದಿಂದ ಅನೆಗಳನ್ನು ಕಳುಹಿಸಲು ಅಲ್ಲಿನ ಸರ್ಕಾರ ಕೋರಿದ್ದು, ಅದರನ್ವಯ 12 ಗಂಡು ಹಾಗೂ ಎರಡು ಹೆಣ್ಣು ಆನೆಗಳ ಈ ತಂಡವನ್ನು ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅರಣ್ಯ ಇಲಾಖೆಯಿಂದ ಆದೇಶ ಪತ್ರ ಇಲ್ಲಿನ ಆನೆ ಬಿಡಾರದ ಆಡಳಿತಕ್ಕೆ ತಲುಪಿದೆ.

ಸಕ್ರೆಬೈಲು ಆನೆ ಬಿಡಾರದಲ್ಲಿ ಇರುವ ರವಿ (25), ಶಿವಾ (06), ಮಣಿಕಂಠ (35), ಬೆಂಗಳೂರಿನ ಗಣೇಶ (36), ರಾಮಪುರದ ಬಂಡೀಪುರ ಹುಲಿ ಅಭಯಾರಣ್ಯದ ಗಣೇಶ (17), ಕೃಷ್ಣ (21), ಗಜ (07), ಮರ್ಸಿಹಾ (07), ಪೂಜಾ (09), ಮಡಿಕೇರಿಯಲ್ಲಿರುವ ದುಬಾರೆ ಆನೆ ಬಿಡಾರದಿಂದ ಜನರಲ್ ತಿಮ್ಮಯ್ಯ (08), ಜನರಲ್ ಕಾರಿಯಪ್ಪ (08), ವಲ್ಲಿ (40), ಲವ (21) ಹಾಗೂ ಮಾರುತಿ (20) ಆನೆಗಳು ಮಧ್ಯಪ್ರದೇಶಕ್ಕೆ ತೆರಳಲಿವೆ.

ಮಧ್ಯಪ್ರದೇಶದಿಂದ ಬಂದಿದ್ದ ಅರಣ್ಯಾಧಿಕಾರಿ ಹಾಗೂ ವೈದ್ಯಾಧಿಕಾರಿ ತಂಡ ರಾಜ್ಯದ ಆನೆ ಬಿಡಾರದ ಆನೆಗಳ ಆರೋಗ್ಯ ಹಾಗೂ ಅಲ್ಲಿನ ಪರಿಸರಕ್ಕೆ ಹೊಂದಿಕೊಳ್ಳಬಹುದಾದ ಸಾಧ್ಯತೆ ಪರಿಶೀಲಿಸಿ ಆನೆಗಳ ಪಟ್ಟಿ ಕೊಟ್ಟಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...