Wednesday, July 8, 2026
Wednesday, July 8, 2026

ಸಲಾಂ ಆರತಿ ಹೆಸರು ಬದಲಾಗುತ್ತಿದೆ ಅಷ್ಟೆ- ಸಚಿವೆ ಶಶಿಕಲಾ ಜೊಲ್ಲೆ

Date:

ರಾಜ್ಯದ ಯಾವುದೇ ದೇವಾಲಯಗಳಲ್ಲಿ ಆರತಿ ಪದ್ಧತಿ ರದ್ದಾಗಿಲ್ಲ. ಸಲಾಂ ಆರತಿ ಹೆಸರಿನಲ್ಲಿ ಬದಲಾವಣೆ ಮಾಡಲಾಗುತ್ತಿದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ಧಾರ್ಮಿಕ ಪರಿಷತ್ ಗೂ ಕೆಲ ಅಧಿಕಾರಗಳು ಇವೆ. ಸಲಾಂ ಎಂಬುದು ಸಂಸ್ಕೃತ ಪದವಲ್ಲ ಹಾಗಾಗಿ ಸಲಾಂ ಜಾಗದಲ್ಲಿ ಬೇರೊಂದು ಸಂಸ್ಕೃತ ಹೆಸರಿರಬೇಕು ಎಂದು ಹೇಳಿದೆ. ಧಾರ್ಮಿಕ ಪರಿಷತ್ ಮನವಿಗೆ ಸ್ಪಂದಿಸಿದ್ದೇವೆ. ಆದರೆ ಈ ಬಗ್ಗೆ ಅಂತಿಮವಾಗಿ ತೀರ್ಮಾನ ಮಾಡಿಲ್ಲ ಎಂದರು.
ಅಧಿಕಾರಿಗಳು, ಇತಿಹಾಸಕಾರರ ಜೊತೆ ಸಮಾಲೋಚಿಸಿ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಸರ್ಕಾರದ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಸಲಾಂ ಆರತಿ ಬದಲಿಗೆ ಆರತಿ ನಮಸ್ಕಾರ, ದೀವಟಿಗೆ ಸಲಾಂ ಬದಲಿಗೆ ಮಂಗಳಾರತಿ ನಮಸ್ಕಾರ ಎಂದು ಬದಲಿಸಲು ಚಿಂತನೆ ನಡೆದಿದೆ ಎಂದರು.

ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿನ ದೇವಾಲಯಗಳಲ್ಲಿ ನಡೆಯುತ್ತಿದ್ದ ಸಲಾಂ ಮಂಗಳಾರತಿ ಎಂಬ ಹೆಸರನ್ನು ಬದಲಾವಣೆ ಮಾಡಬೇಕು ಎಂದು ಧಾರ್ಮಿಕ ಪರಿಷತ್ ಮನವಿ ಮಾಡಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...