Tuesday, June 17, 2025
Tuesday, June 17, 2025

ಲಾರಿ ಕಾರು ಢಿಕ್ಕಿ: ಮೂವರು ವಿದ್ಯಾರ್ಥಿಗಳ ಮರಣ

Date:

ಶಿವಮೊಗ್ಗ ತಾಲೂಕು ಕಲ್ಲಾಪುರ ಗ್ರಾಮದಲ್ಲಿ ಭೀಕರ ಅಪಘಾತ ನಡೆದಿದೆ. ನಿನ್ನೆ ಡಿಸೆಂಬರ್ 11ರ ಭಾನುವಾರ ಬೆಳಗ್ಗೆ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದ ಮೂವರು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಓರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮೃತಪಟ್ಟ ವಿದ್ಯಾರ್ಥಿಗಳು ದಾವಣಗೆರೆಯ ಅವರಗೆರೆ ನಿವಾಸಿಗಳು ಎಂದು ತಿಳಿದುಬಂದಿದೆ. 21 ವರ್ಷದ ವಯೋಮಾನದವರಾದ ವಿವೇಕ್, ಕಾರ್ತಿಕ್, ಮೋಹನ್ ಮೃತಪಟ್ಟ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ದಾವಣಗೆರೆ ನಗರ ಬಡಾವಣೆ ನಿವಾಸಿ ರುದ್ರೇಶ್ ಪೊಟೀಲ್ (20) ಗಂಭೀರ ಗಾಯಗೊಂಡ ಯುವಕನನ್ನು ಶಿವಮೊಗ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿಗಳು ಶಿವಮೊಗ್ಗದಿಂದ ದಾವಣಗೆರೆಗೆ ಕಾರಿನಲ್ಲಿ ತೆರಳುತ್ತಿದ್ದರು. ಎದುರುಗಡೆಯಿಂದ ಮೆಕ್ಕೆಜೋಳ ತುಂಬಿಕೊಂಡ ಲಾರಿ ಏಕಾಏಕಿ ಡಿಕ್ಕಿ ಹೊಡಿದಿದೆ. ಇದರಿಂದ ಕಾರಿನ ಮುಂಭಾಗ ಜಜ್ಜಿ ಹೋಗಿದೆ. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಮಾಹಿತಿ ದೊರೆತಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಆಗಮಿಸಿ, ಘಟನೆಯ ಬಗ್ಗೆ ತನಿಖೆಯನ್ನು ನಡೆಸುತ್ತಿದ್ದಾರೆ. ಈ ಸಂಬಂಧ ಶಿವಮೊಗ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Friends Health Care Center ಜೂ.18 ರಂದು ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣಾ ಶಿಬಿರ

Friends Health Care Center ಫ್ರೆಂಡ್ಸ್ ಹೆಲ್ತ್ ಕೇರ್ ಸೆಂಟರ್ ಸುದೇನು...