Sunday, December 14, 2025
Sunday, December 14, 2025

ರಸ್ತೆಗೆ ಡಾ.ಪುನೀತ್ ರಾಜಕುಮಾರ್ ಹೆಸರನ್ನ ಅಧಿಕೃತ ನಾಮಕರಣಮಾಡಲು ಮನವಿ

Date:

ಶಿವಮೊಗ್ಗ, ಹೊಸಮನೆ 1 ನೇ ಮುಖ್ಯ ರಸ್ತೆಗೆ ಕರ್ನಾಟಕ ರತ್ನ ದಿವಂಗತ ಡಾ|| ಪುನೀತ್ ರಾಜ್ ಕುಮಾರ್ ರಸ್ತೆ ಎಂದು ನಾಮಕರಣ ಮಾಡಲು ಕೋರಿ ಮಹಾಪೌರರಿಗೆ ಮನವಿ ನೀಡಲಾಯಿತು.

ನಾಡುಕಂಡ ಹೆಸರಾಂತ ನಟ, ಮಾನವೀಯ ಮೌಲ್ಯಗಳನ್ನು ನಾಡಿಗೆ ಸಾರಿದ ಮಹಾನ್ ನಟ, ಮೇರು ವ್ಯಕ್ತಿತ್ವದ ಕರ್ನಾಟಕ ರತ್ನ ದಿವಂಗತ ಡಾ. ಪುನೀತ್ ರಾಜ್ ಕುಮಾರ್ ರವರ ಹೆಸರನ್ನು ನಗರದ 20 ನೇ ವಾರ್ಡ್ ಹೊಸಮನೆ ಬಡಾವಣೆ, 1 ನೇ ಮುಖ್ಯ ರಸ್ತೆಗೆ ದಿವಂಗತ ಡಾ. ಪುನೀತ್ ರಾಜ್ ಕುಮಾರ್ ರಸ್ತೆ ಎಂದು ನಾಮಕರಣ ಮಾಡಬೇಕೆಂದು ಅವರ ಅಭಿಮಾನಿಗಳು ಹಾಗೂ ಬಡಾವಣೆ ನಾಗರೀಕರು ಒಕ್ಕೊರಲಿನಿಂದ ಪಾಲಿಕೆ ಸದಸ್ಯರಾದ ಶ್ರೀಮತಿ ರೇಖಾ ರಂಗನಾಥ್ ರವರೊಂದಿಗೆ ಸಭೆ ಸೇರಿ ತೀರ್ಮಾನಿಸಿದ್ದು.

ತಾವುಗಳು ಸಹ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಅನುಮೋದಿಸಿ ಡಾ.ಪುನೀತ್ ರಾಜ್ ಕುಮಾರ್ ರಸ್ತೆ ಎಂದು ನಾಮಕರಣ ಮಾಡಲು ಒಪ್ಪಿಗೆ ನೀಡಬೇಕೆಂದು ತಮ್ಮಲ್ಲಿ ವಿನಯ ಪೂರ್ವಕವಾಗಿ ಕೋರಿಕೊಂಡಿದ್ದು.

ಈ ಸಂದರ್ಭದಲ್ಲಿ  ಹೊಸಮನೆ ಬಡಾವಣೆ ಪಾಲಿಕೆ ಸದಸ್ಯೆ ಹಾಗೂ ವಿರೋಧ ಪಕ್ಷದ ನಾಯಕಿ ಶ್ರೀಮತಿ ರೇಖಾ ರಂಗನಾಥ್, ಹೊಸಮನೆ ನಾಗರೀಕ ಸಮಿತಿ ಅಧ್ಯಕ್ಷರಾದ ಆರ್. ನಾಗರಾಜ್, ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ಪದಾದಿಕಾರಿಗಳಾದ ಸುರೇಶ್, ಮಾರುತಿಭಗತ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...