ಶಿವಮೊಗ್ಗ ಜಿಲ್ಲಾಧಿಕಾರಿಗಳು ತಮ್ಮ ಕಛೇರಿ ಆವರಣದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದರು.
ಮಾಂಡೋಸ್ ಚಂಡಮಾರುತದಿಂದ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಸಾಧಾರಣದಿಂದ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ಇದರಿಂದಾಗಿ ಕಟಾವಿಗೆ ಬಂದಿದ್ದ ಭತ್ತದ ಬೆಳೆ ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಇದ್ದು, ಆಯಾ ತಾಲೂಕಿನ ತಹಶೀಲ್ದಾರರಿಗೆ ಖುದ್ದಾಗಿ ಬಾದಿತ ಸ್ಥಳಕ್ಕೆ ಭೇಟಿ ನೀಡಿ, ಸಮೀಕ್ಷೆ ನಡೆಸಿ, ವಾಸ್ತವ ವರದಿ ನೀಡುವಂತೆ ಸೂಚಿಸಲಾಗಿದೆ ಎಂದರು.
ಕಂದಾಯ ಮತ್ತು ಕೃಷಿ ಇಲಾಖೆಯ ವತಿಯಿಂದ ಜಂಟಿ ವರದಿ ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈಗಾಗಲೇ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದೆ. ಜೊತೆಗೆ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಗಳಿಂದ ಮಾಹಿತಿ ಪಡೆದು ಸರ್ಕಾರದ ಸೂಚನೆಯಂತೆ ಡಿಸೆಂಬರ್ 20ರೊಳಗಾಗಿ ಶರಾವತಿ ಸಂತ್ರಸ್ಥರ ಸಮಸ್ಯೆಗಳ ಕುರಿತ ಸಮಗ್ರ ವರದಿ ನೀಡಲಾಗುವುದು. ಈ ಹಿಂದಿನ ಸಮೀಕ್ಷೆಯ ಮಾಹಿತಿ, ಸರ್ವೇ ನಂ. ಹಾಗೂ ಗ್ರಾಮಾವಾರು ಮಾಹಿತಿ ಸಂಗ್ರಹಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ. ಪ್ರಕಾಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ, ಲೋಕೇಶ್ವರಪ್ಪ, ರಾಮಪ್ಪಗೌಡ, ಸೇರಿದಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು