Thursday, February 5, 2026
Thursday, February 5, 2026

ಮಾಂಡೋಸ್ ಗೆ ತುತ್ತಾದ ಭತ್ತದ ಬೆಳೆ ಸಮೀಕ್ಷೆ ಮಾಡಿ ವರದಿ ನೀಡಿ- ಡಾ.ಸೆಲ್ವಮಣಿ

Date:

ಶಿವಮೊಗ್ಗ ಜಿಲ್ಲಾಧಿಕಾರಿಗಳು ತಮ್ಮ ಕಛೇರಿ ಆವರಣದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದರು.

ಮಾಂಡೋಸ್ ಚಂಡಮಾರುತದಿಂದ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಸಾಧಾರಣದಿಂದ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ಇದರಿಂದಾಗಿ ಕಟಾವಿಗೆ ಬಂದಿದ್ದ ಭತ್ತದ ಬೆಳೆ ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಇದ್ದು, ಆಯಾ ತಾಲೂಕಿನ ತಹಶೀಲ್ದಾರರಿಗೆ ಖುದ್ದಾಗಿ ಬಾದಿತ ಸ್ಥಳಕ್ಕೆ ಭೇಟಿ ನೀಡಿ, ಸಮೀಕ್ಷೆ ನಡೆಸಿ, ವಾಸ್ತವ ವರದಿ ನೀಡುವಂತೆ ಸೂಚಿಸಲಾಗಿದೆ ಎಂದರು.

ಕಂದಾಯ ಮತ್ತು ಕೃಷಿ ಇಲಾಖೆಯ ವತಿಯಿಂದ ಜಂಟಿ ವರದಿ ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈಗಾಗಲೇ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದೆ. ಜೊತೆಗೆ ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆಗಳಿಂದ ಮಾಹಿತಿ ಪಡೆದು ಸರ್ಕಾರದ ಸೂಚನೆಯಂತೆ ಡಿಸೆಂಬರ್ 20ರೊಳಗಾಗಿ ಶರಾವತಿ ಸಂತ್ರಸ್ಥರ ಸಮಸ್ಯೆಗಳ ಕುರಿತ ಸಮಗ್ರ ವರದಿ ನೀಡಲಾಗುವುದು. ಈ ಹಿಂದಿನ ಸಮೀಕ್ಷೆಯ ಮಾಹಿತಿ, ಸರ್ವೇ ನಂ. ಹಾಗೂ ಗ್ರಾಮಾವಾರು ಮಾಹಿತಿ ಸಂಗ್ರಹಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ. ಪ್ರಕಾಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ, ಲೋಕೇಶ್ವರಪ್ಪ, ರಾಮಪ್ಪಗೌಡ, ಸೇರಿದಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...