Thursday, October 3, 2024
Thursday, October 3, 2024

ಉದ್ಯಮದಲ್ಲಿ ಯಶಸ್ಸು ಸಾಧಿಸಬೇಕಿದ್ದರೆ ಆತ್ಮವಿಶ್ವಾಸ ಮುಖ್ಯ- ಕೆ.ಎಸ್.ಈಶ್ವರಪ್ಪ

Date:

[3:34 pm, 13/12/2022] Anju KLive Sub Editor: ನಮ್ಮ ಶಿವಮೊಗ್ಗದ ಕುರಿತು ಸಾರ್ವಜನಿಕರು ಮುಕ್ತವಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಬಹುದು
[3:34 pm, 13/12/2022] Anju KLive Sub Editor: ಉದ್ಯೋಗ ಅರಸುವ ಜತೆಯಲ್ಲಿ ಸ್ವಯಂ ಉದ್ಯೋಗ ಹಾಗೂ ಕೈಗಾರಿಕಾ ಆರಂಭಿಸುವ ಬಗ್ಗೆ ಆಲೋಚನೆ ನಡೆಸಬೇಕು. ಉದ್ಯಮದಲ್ಲಿ ಯಶಸ್ಸು ಸಾಧಿಸಬೇಕಾದರೆ ಆತ್ಮವಿಶ್ವಾಸ ಹಾಗೂ ಧೈರ್ಯ ಮುಖ್ಯ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದ ಸಹ್ಯಾದ್ರಿ ಕಲಾ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಸಹ್ಯಾದ್ರಿ ಕಲಾ ಕಾಲೇಜಿನ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

ಪದವಿ ಶಿಕ್ಷಣ ಪೂರೈಸಿದ ನಂತರ ಮುಂದೆ ಯಾವ ಕ್ಷೇತ್ರದಲ್ಲಿ ಮುನ್ನಡೆಯಬೇಕು ಎಂಬ ಸ್ಪಷ್ಟ ಕಲ್ಪನೆ ಇರುವುದಿಲ್ಲ. ಇಂತಹ ಸಂದರ್ಭದಲ್ಲಿ ಗುರುಗಳ ಮಾರ್ಗದರ್ಶನ ಹಾಗೂ ಆಸಕ್ತಿ ಕ್ಷೇತ್ರದಲ್ಲಿ ಸರಿಯಾದ ತರಬೇತಿ ಪಡೆಯುವುದರಿಂದ ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ ಎಂದು ತಿಳಿಸಿದರು.
ನಾನು ಪದವಿ ಪೂರೈಸಿದ ನಂತರ ಹಿರಿಯರ ಮಾರ್ಗದರ್ಶನದಲ್ಲಿ ಸಣ್ಣ ಕೈಗಾರಿಕಾ ಆರಂಭಿಸಿ ಅನೇಕ ಸವಾಲುಗಳನ್ನು ಎದುರಿಸಿ ಹಂತ ಹಂತವಾಗಿ ಬೆಳೆದೆ. ವಿವಿಧ ಉದ್ಯಮ ಕ್ಷೇತ್ರಕ್ಕೆ ಕಾಲಿಟ್ಟು ಯಶಸ್ಸು ಸಾಧಿಸಿದೆ. ಪ್ರಯತ್ನ ಮಾಡುವಾಗ ಹಿಂದೇಟು ಹಾಕಿದರೆ ಯಾವ ಕ್ಷೇತ್ರವೇ ಆದರೂ ವೈಫಲ್ಯ ಕಾಣುತ್ತೇವೆ. ಆದರೆ ಪ್ರಯತ್ನ ನಿರಂತರವಾಗಿ ಇದ್ದಾಗ ಮಾತ್ರ ನಮ್ಮ ಗುರಿ ಮುಟ್ಟಲು ಸಾಧ್ಯವಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಮಾತನಾಡಿ, ಕೌಶಲ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಟ್ಟ ಪ್ರಧಾನ ಮಂತ್ರಿ ನರೇಂದ್ರ ಮೋದಿ. ದೇಶದ ಯುವಜನರಿಗೆ ಕೌಶಲ್ಯ ಕಲಿಕೆ ಒದಗಿಸುವ ದೃಷ್ಠಿಯಿಂದ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ. ಕೌಶಲ್ಯ ಉದ್ಯೋಗ ಒದಗಿಸುವ ಜತೆಯಲ್ಲಿ ಸ್ವಯಂ ಉದ್ಯೋಗ ಆರಂಭಿಸಲು ಎಲ್ಲ ರೀತಿ ಸಾಲ ಸೌಲಭ್ಯ ನೀಡುವ ಯೋಜನೆಗಳನ್ನು ಅನುಷ್ಠಾನ ಮಾಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರವಾಸೋದ್ಯಮ ಕ್ಷೇತ್ರ, ಶಿಕ್ಷಣ, ಆರೋಗ್ಯ, ಹಣಕಾಸು ಕ್ಷೇತ್ರಗಳಲ್ಲಿ ಇರುವ ಅವಕಾಶಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಸ್ವಯಂ ಉದ್ಯೋಗ ಅವಕಾಶ ಸೃಷ್ಠಿಸಿಕೊಳ್ಳುವ ಬಗ್ಗೆ ಆಲೋಚನೆ ನಡೆಸಬೇಕು. ಸಂಸ್ಥೆ ಆರಂಭಿಸುವ ಮೂಲಕ ಅನೇಕರಿಗೆ ಉದ್ಯೋಗ ಒದಗಿಸಬೇಕು ಎಂದು ತಿಳಿಸಿದರು.

ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಸಾವಿರಕ್ಕೂ ಅಧಿಕ ಉದ್ಯೋಗ ಆಕಾಂಕ್ಷಿಗಳು ಪಾಲ್ಗೊಂಡಿದ್ದರು. 30ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ. 7ನೇ ತರಗತಿ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಶಿಕ್ಷಣ ಪೂರೈಸಿದ ಎಲ್ಲರಿಗೂ ಅವಕಾಶ ಇತ್ತು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎಚ್.ಎಂ.ಸುರೇಶ್, ಟೀಕ್ಯಾನಾಯ್ಕ್, ಸಮನ್ವಯ ಕಾಶಿ, ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಚಾರ್ಯ ಡಾ. ಧನಂಜಯ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...

Mahatma Gandhi ಗಾಂಧಿ ಟೋಪಿ ಧಾರಣೆ ಕೇವಲ ತೋರಿಕೆಯಾಗಬಾರದು. ಆದರ್ಶಗಳ ಪಾಲನೆಯಾಗಬೇಕು-ಡಾ.ಎಚ್.ಬಿ.ಮಂಜುನಾಥ್.

Mahatma Gandhi ಗಾಂಧಿ ಟೋಪಿಯನ್ನು ಧರಿಸುವುದು ಕೇವಲ ತೋರಿಕೆಯಾಗದೆ ಮಹಾತ್ಮರ ಆದರ್ಶಗಳ...