Monday, December 15, 2025
Monday, December 15, 2025

ಉದ್ಯಮದಲ್ಲಿ ಯಶಸ್ಸು ಸಾಧಿಸಬೇಕಿದ್ದರೆ ಆತ್ಮವಿಶ್ವಾಸ ಮುಖ್ಯ- ಕೆ.ಎಸ್.ಈಶ್ವರಪ್ಪ

Date:

[3:34 pm, 13/12/2022] Anju KLive Sub Editor: ನಮ್ಮ ಶಿವಮೊಗ್ಗದ ಕುರಿತು ಸಾರ್ವಜನಿಕರು ಮುಕ್ತವಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಬಹುದು
[3:34 pm, 13/12/2022] Anju KLive Sub Editor: ಉದ್ಯೋಗ ಅರಸುವ ಜತೆಯಲ್ಲಿ ಸ್ವಯಂ ಉದ್ಯೋಗ ಹಾಗೂ ಕೈಗಾರಿಕಾ ಆರಂಭಿಸುವ ಬಗ್ಗೆ ಆಲೋಚನೆ ನಡೆಸಬೇಕು. ಉದ್ಯಮದಲ್ಲಿ ಯಶಸ್ಸು ಸಾಧಿಸಬೇಕಾದರೆ ಆತ್ಮವಿಶ್ವಾಸ ಹಾಗೂ ಧೈರ್ಯ ಮುಖ್ಯ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದ ಸಹ್ಯಾದ್ರಿ ಕಲಾ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಸಹ್ಯಾದ್ರಿ ಕಲಾ ಕಾಲೇಜಿನ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

ಪದವಿ ಶಿಕ್ಷಣ ಪೂರೈಸಿದ ನಂತರ ಮುಂದೆ ಯಾವ ಕ್ಷೇತ್ರದಲ್ಲಿ ಮುನ್ನಡೆಯಬೇಕು ಎಂಬ ಸ್ಪಷ್ಟ ಕಲ್ಪನೆ ಇರುವುದಿಲ್ಲ. ಇಂತಹ ಸಂದರ್ಭದಲ್ಲಿ ಗುರುಗಳ ಮಾರ್ಗದರ್ಶನ ಹಾಗೂ ಆಸಕ್ತಿ ಕ್ಷೇತ್ರದಲ್ಲಿ ಸರಿಯಾದ ತರಬೇತಿ ಪಡೆಯುವುದರಿಂದ ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ ಎಂದು ತಿಳಿಸಿದರು.
ನಾನು ಪದವಿ ಪೂರೈಸಿದ ನಂತರ ಹಿರಿಯರ ಮಾರ್ಗದರ್ಶನದಲ್ಲಿ ಸಣ್ಣ ಕೈಗಾರಿಕಾ ಆರಂಭಿಸಿ ಅನೇಕ ಸವಾಲುಗಳನ್ನು ಎದುರಿಸಿ ಹಂತ ಹಂತವಾಗಿ ಬೆಳೆದೆ. ವಿವಿಧ ಉದ್ಯಮ ಕ್ಷೇತ್ರಕ್ಕೆ ಕಾಲಿಟ್ಟು ಯಶಸ್ಸು ಸಾಧಿಸಿದೆ. ಪ್ರಯತ್ನ ಮಾಡುವಾಗ ಹಿಂದೇಟು ಹಾಕಿದರೆ ಯಾವ ಕ್ಷೇತ್ರವೇ ಆದರೂ ವೈಫಲ್ಯ ಕಾಣುತ್ತೇವೆ. ಆದರೆ ಪ್ರಯತ್ನ ನಿರಂತರವಾಗಿ ಇದ್ದಾಗ ಮಾತ್ರ ನಮ್ಮ ಗುರಿ ಮುಟ್ಟಲು ಸಾಧ್ಯವಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಮಾತನಾಡಿ, ಕೌಶಲ್ಯಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಟ್ಟ ಪ್ರಧಾನ ಮಂತ್ರಿ ನರೇಂದ್ರ ಮೋದಿ. ದೇಶದ ಯುವಜನರಿಗೆ ಕೌಶಲ್ಯ ಕಲಿಕೆ ಒದಗಿಸುವ ದೃಷ್ಠಿಯಿಂದ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದಾರೆ. ಕೌಶಲ್ಯ ಉದ್ಯೋಗ ಒದಗಿಸುವ ಜತೆಯಲ್ಲಿ ಸ್ವಯಂ ಉದ್ಯೋಗ ಆರಂಭಿಸಲು ಎಲ್ಲ ರೀತಿ ಸಾಲ ಸೌಲಭ್ಯ ನೀಡುವ ಯೋಜನೆಗಳನ್ನು ಅನುಷ್ಠಾನ ಮಾಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರವಾಸೋದ್ಯಮ ಕ್ಷೇತ್ರ, ಶಿಕ್ಷಣ, ಆರೋಗ್ಯ, ಹಣಕಾಸು ಕ್ಷೇತ್ರಗಳಲ್ಲಿ ಇರುವ ಅವಕಾಶಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಸ್ವಯಂ ಉದ್ಯೋಗ ಅವಕಾಶ ಸೃಷ್ಠಿಸಿಕೊಳ್ಳುವ ಬಗ್ಗೆ ಆಲೋಚನೆ ನಡೆಸಬೇಕು. ಸಂಸ್ಥೆ ಆರಂಭಿಸುವ ಮೂಲಕ ಅನೇಕರಿಗೆ ಉದ್ಯೋಗ ಒದಗಿಸಬೇಕು ಎಂದು ತಿಳಿಸಿದರು.

ಶಿವಮೊಗ್ಗ ನಗರದ ಸಹ್ಯಾದ್ರಿ ಕಲಾ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಸಾವಿರಕ್ಕೂ ಅಧಿಕ ಉದ್ಯೋಗ ಆಕಾಂಕ್ಷಿಗಳು ಪಾಲ್ಗೊಂಡಿದ್ದರು. 30ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ. 7ನೇ ತರಗತಿ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಶಿಕ್ಷಣ ಪೂರೈಸಿದ ಎಲ್ಲರಿಗೂ ಅವಕಾಶ ಇತ್ತು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎಚ್.ಎಂ.ಸುರೇಶ್, ಟೀಕ್ಯಾನಾಯ್ಕ್, ಸಮನ್ವಯ ಕಾಶಿ, ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಚಾರ್ಯ ಡಾ. ಧನಂಜಯ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...