Wednesday, February 4, 2026
Wednesday, February 4, 2026

ಜನವರಿ 7 ರಿಂದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ- ಡಾ.ಸೆಲ್ವಮಣಿ

Date:

ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವನ್ನು 2023ರ ಜನವರಿ 7, 08 ಮತ್ತು 09ರಂದು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು.

ಈ ಸಂಬಂಧ ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರತಿಭಾ ಕಾರಂಜಿಯ ಲಾಂಛನ ಹಾಗೂ ಜಾಲತಾಣ ಲೋಕಾರ್ಪಣೆಗೊಳಿಸಿ ಮಾಧ್ಯಮದ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಕಲೆಗಳನ್ನು ಉತ್ತೇಜಿಸುವ, ಶಾಲಾ ವಿದ್ಯಾರ್ಥಿಗಳ ಕಲಾತ್ಮಕ ಪ್ರತಿಭೆ, ಸೃಜನಾತ್ಮಕ ಕೌಶಲ್ಯಗಳನ್ನು ಹೊರತರಲು ಇದೊಂದು ಉತ್ತಮ ವೇದಿಕೆ ಇದಾಗಿರಲಿದೆ ಎಂದರು.

ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ ನಡೆಸಲಾದ ಪ್ರತಿಭಾಕಾರಂಜಿ ಹಾಗೂ ಕಲೋತ್ಸವದಲ್ಲಿ ಸ್ಥಾನ ಪಡೆದ 1375ಕ್ಕೂ ಹೆಚ್ಚಿನ ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ರೀತಿಯ 23 ವೈಯಕ್ತಿಕ ವಿಭಾಗಗಳಲ್ಲಿ ಹಾಗೂ 03 ಸಾಮೂಹಿಕ ವಿಭಾಗದಲ್ಲಿ ಭಾಗವಹಿಸಲಿದ್ದಾರೆ. ಪ್ರತಿಭಾ ಕಾರಂಜಿಯ ಉದ್ಘಾಟನಾ ಕಾರ್ಯಕ್ರಮವು ಜನವರಿ 07ರಂದು ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ. ಉಳಿದಂತೆ ಪ್ರತಿಭಾಕಾರಂಜಿಯ ಏಕರೀತಿಯ ಸಾಂಸ್ಕøತಿಕ ಸ್ಪರ್ಧೆಗಳು ಡಿ.ವಿ.ಎಸ್.ಕಾಲೇಜಿನ ವಿವಿಧ ಕೊಠಡಿಗಳಲ್ಲಿ ನಡೆಯಲಿವೆ ಎಂದರು.

ಸ್ಪರ್ಧೆಗಳಿಗೆ ತಜ್ಞ ಹಾಗೂ ಪರಿಣಿತಿ ಹೊಂದಿರುವ ಜಿಲ್ಲೆಯ ಹಾಗೂ ಹೊರ ಜಿಲ್ಲೆಗಳಿಂದ 150ಕ್ಕೂ ಹೆಚ್ಚಿನ ತೀರ್ಪುಗಾರರನ್ನು ನಿಯೋಜಿಸಲಾಗಿದೆ ಅದರ ಯಶಸ್ಸಿಗಾಗಿ ಹಾಗೂ ವ್ಯವಸ್ಥಿತ ನಿರ್ವಹಣೆಗಾಗಿ ವಿವಿಧ 19ಸಮಿತಿಗಳನ್ನು ರಚಿಸಲಾಗಿದ್ದು, ಅದರ ಮೇಲ್ವಿಚಾರಣೆಗಾಗಿ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಥಮ ಸ್ಥಾನ ರೂ.6,000/, ದ್ವಿತೀಯ ಸ್ಥಾನ ರೂ.4,000/- ಹಾಗೂ ತೃತೀಯ ಸ್ಥಾನ ರೂ.2,000/-ಗಳ ನಗದು ಪುರಸ್ಕಾರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು. ಆಗಮಿಸಿದ ಕ್ರೀಡಾಪಟುಗಳಿಗೆ ಉತ್ತಮ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದ್ದು, ನಗರದಲ್ಲಿ ಸುಮಾರು 13 ಸ್ಥಳಗಳನ್ನು ಗುರುತಿಸಲಾಗಿದೆ ಎಂದರು.

ಶಿಷ್ಟಾಚಾರದಂತೆ ಈ ಕಾರ್ಯಕ್ರಮದ ಉದ್ಘಾಟನೆಗೆ ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಗಣ್ಯರನ್ನು ಆಹ್ವಾನಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ.ಪ್ರಕಾಶ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ, ಲೋಕೇಶ್ವರಪ್ಪ, ರಾಮಪ್ಪಗೌಡ ಸೇರಿದಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...