Monday, December 15, 2025
Monday, December 15, 2025

ಶಿವಮೊಗ್ಗ ಹೇಗಿರಬೇಕು? ಸಾರ್ವಜನಿಕ ಅಭಿಪ್ರಾಯ ಸಮೀಕ್ಷೆ ಅಭಿಯಾನ

Date:

ಸಾರ್ವಜನಿಕರ ಅಭಿಪ್ರಾಯವು ಉತ್ತಮ ದೇಶ ನಿರ್ಮಾಣ ಮಾಡುವಲ್ಲಿ ಸಹಕಾರಿ ಆಗಲಿದೆ. ಸಾರ್ವಜನಿಕರ ಅಭಿಪ್ರಾಯದಿಂದ ಸರ್ಕಾರಗಳು ಆಡಳಿತ ಶೈಲಿ ಉತ್ತಮಪಡಿಸಿಕೊಳ್ಳುವಲ್ಲಿ ಅನುಕೂಲ ಆಗಲಿದೆ. ಕಾನೂನುಗಳನ್ನು ರೂಪಿಸಲು ಸಾರ್ವಜನಿಕರ ಅನಿಸಿಕೆ ಪ್ರಮುಖ ಆಗುತ್ತದೆ ಎಂದು ವಿಶ್ವಚೆಸ್ ಮಾಸ್ಟರ್ ಸ್ಟ್ಯಾನಿ ಜಾರ್ಜ್ ಹೇಳಿದರು.

ಶಿವಮೊಗ್ಗ ನಗರದ ಸ್ಮಾರ್ಟ್ ಸಿಟಿ ಕಚೇರಿ ಸಭಾಂಗಣದಲ್ಲಿ ಶಿವಮೊಗ್ಗ ನಗರ ಹೇಗಿದೆ ಎಂಬ ಕುರಿತ ಸಾರ್ವಜನಿಕ ಅಭಿಪ್ರಾಯ ಸಮೀಕ್ಷೆ ಕಾರ್ಯದ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದರು. ಶಿವಮೊಗ್ಗ ಜಿಲ್ಲೆ ಸಾರಿಗೆ ಕ್ಷೇತ್ರದಲ್ಲಿ ಮಹತ್ತರ ಪ್ರಗತಿ ಸಾಧಿಸಿದ್ದು, ವಿಮಾಣ ನಿಲ್ದಾಣ ಶೀಘ್ರದಲ್ಲಿ ಬರುತ್ತಿದೆ. ರಸ್ತೆ, ರೈಲು ಮಾರ್ಗದ ಸಾರಿಗೆ ವ್ಯವಸ್ಥೆ ಅತ್ಯುತ್ತಮ ಪ್ರಗತಿ ಸಾಧಿಸಿದೆ.

ಪ್ರವಾಸೋದ್ಯಮ, ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಶಿವಮೊಗ್ಗ ಉನ್ನತ ಪ್ರಗತಿ ಸಾಧಿಸಿದೆ. ಇದರಿಂದ ಉದ್ಯೋಗ ಸೃಷ್ಠಿ ಆಗುತ್ತಿದೆ. ಶಿವಮೊಗ್ಗ ಮುಂದಿನ ದಿನಗಳಲ್ಲಿ ಮಾದರಿಯಾಗಿ ರೂಪುಗೊಳ್ಳಲಿದೆ ಎಂದು ತಿಳಿಸಿದರು.

ಸ್ಮಾರ್ಟ್ ಸಿಟಿ ಸಾರ್ವಜನಿಕ ಸಂಪರ್ಕಾಧಿಕಾರಿ ಮತ್ತು ನಗರ ದತ್ತಾಂಶಗಳ ಅಧಿಕಾರಿ ಬ್ರಿಜಿಟ್ ವರ್ಗೀಸ್ ಮಾತನಾಡಿ, ಶಿವಮೊಗ್ಗ ನಗರದಲ್ಲಿ ಆರೊಗ್ಯ, ಶಿಕ್ಷಣ, ನೀರು ಪೂರೈಕೆ, ಸಾರ್ವಜನಿಕ ರಕ್ಷಣೆ, ಪರಿಸರ ಸಂರಕ್ಷಣೆ, ವಸತಿ ಸೌಲಭ್ಯ ಸಾರಿಗೆ ವ್ಯವಸ್ಥೆ, ಇತ್ಯಾದಿ ಮೂಲಸೌಕರ್ಯ ಸೇರಿದಂತೆ ಅಗತ್ಯ ವ್ಯವಸ್ಥೆಗಳ ಬಗ್ಗೆ ಮಾಹಿತಿ ಆನ್‌ಲೈನ್ ಮೂಲಕ ದಾಖಲಿಸುವ ಕಾರ್ಯ ನಡೆಯುತ್ತಿದೆ. ಎಲ್ಲ ವರ್ಗದ ಜನರು ಭಾಗವಹಿಸುವ ರೀತಿಯಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು. ವಿವಿಧ ಇಲಾಖೆಗಳಡಿ ಇರುವ ಸೌಲಭ್ಯಗಳ ಸಾಂಖ್ಯಿಕ ಮಾಹಿತಿಯನ್ನು ಮೌಲ್ಯಮಾಪನಕ್ಕಾಗಿ ಸೂಚಿತ ನಮೂನೆಯಲ್ಲಿ ವರದಿ ಸಿದ್ದಪಡಿಸಿ ಸಲ್ಲಿಸಲಾಗಿದೆ. ಈಗ ಜೀವನ ಗುಣಮಟ್ಟ ಸೌಕರ್ಯ ಕುರಿತು ಸಾರ್ವಜನಿಕ ಭಾಗವಹಿಸುವಿಕೆ ಮೂಲಕ ಮಾಹಿತಿ ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ. ನಗರದ ಜನಜೀವನದ ಗುಣಮಟ್ಟ, ಆರ್ಥಿಕ ಸದೃಢತೆ, ಆರ್ಥಿಕ ಸಾಮರ್ಥ್ಯ ಮತ್ತು ಇದರ ಸುಸ್ಥಿರತೆಯನ್ನು ಅಳೆಯುವ ಸಾಧನ ಇದಾಗಿದೆಎಂದು ತಿಳಿಸಿದರು.

ಶಿವಮೊಗ್ಗ ನಗರದ ಸುಲಲಿತ ಜೀವನ ಸೂಚ್ಯಂಕ ಸಿದ್ದಪಡಿಸುವಲ್ಲಿ ಸಾರ್ವಜನಿಕರ ಅಭಿಪ್ರಾಯ ದಾಖಲೀಕರಣವು ಪ್ರಮುಖವಾಗಿದೆ ಎಂದರು.

ಸ್ಮಾರ್ಟ್ ಸಿಟಿ ಜನರಲ್ ಮ್ಯಾನೇಜರ್ ಶರತ್ ಮಾತನಾಡಿ, ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ನಾಗರೀಕ ಸೌಲಭ್ಯಗಳ ಮಾಹಿತಿ ದಾಖಲೀಕರಣ ಕಾರ್ಯ ನಡೆಯುತ್ತಿದ್ದು, ಭಾರತ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯವು ಸ್ಮಾರ್ಟ್ ಸಿಟಿ ಮಿಷನ್ ಮೂಲಕ ಜೀವನಗುಣಮಟ್ಟ ಸೌಕರ್ಯ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ ಎಂದರು.

ಸಮನ್ವಯ ಟ್ರಸ್ಟ್ಕಾ ರ್ಯನಿರ್ವಾಹಕ ನಿರ್ದೇಶಕ ಸಮನ್ವಯ ಕಾಶಿ, ಹಿರಿಯ ಕಾರ್ಯನಿರ್ವಾಹಕ ಅಭಿಯಂತರ ವಿಜಯ್‌ಕುಮಾರ್, ಸಮನ್ವಯ ಸ್ವಯಂಸೇವಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...