Monday, December 15, 2025
Monday, December 15, 2025

ಗೋಪಾಲಗೌಡರು ರಾಜಕೀಯ ಕ್ಷೇತ್ರದ ಶ್ರೇಷ್ಠ ವ್ಯಕ್ತಿ-ಕವಿ ಪೀರ್ ಬಾಷಾ

Date:

ಸಹ್ಯಾದ್ರಿ ಕಲಾ ಕಾಲೇಜಿನ ಕನ್ನಡ ವಿಭಾಗ ಹಾಗೂ ಶಾಂತವೇರಿ ಗೋಪಾಲಗೌಡ ಜನ್ಮ ಶತಮಾನೋತ್ಸವ ಆಚರಣಾ ಸಮಿತಿ ಸಂಯುಕ್ತಾಶ್ರಯದಲ್ಲಿ ಇಂದು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ದಿಕ್ಸೂಚಿ ನಾಯಕ ಶಾಂತವೇರಿ ಗೋಪಾಲಗೌಡ ಸಾಧನೆಯ ಸ್ಮರಣೆ ಕಾರ್ಯಕ್ರಮವನ್ನು ನಡೆಸಲಾಯಿತು.

ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಕಾರ್ಯಕ್ರಮದ ಕುರಿತು ಖ್ಯಾತ ಲೇಖಕರು , ಸಮಾಜಸೇವಕರಾದ ಶ್ರೀ. ಬಿ.ಪೀರ್ ಭಾಷಾ ಅವರು ಮಾತನಾಡಿ, ಶಾಂತವೇರಿ ಗೋಪಾಲಗೌಡರ ಬಗ್ಗೆ ಕೇವಲ ಶಿವಮೊಗ್ಗದವರಲ್ಲದೇ ಎಲ್ಲರೂ ತಿಳಿದುಕೊಳ್ಳಬೇಕಾದ ರಾಜಕೀಯ ಕ್ಷೇತ್ರದ ಶ್ರೇಷ್ಠ ವ್ಯಕ್ತಿ ಎಂದರೆ ತಪ್ಪಾಗಲಾರದು ಎಂದರು.

ಶಾಂತವೇರಿ ಗೋಪಾಲಗೌಡರು ಕೇವಲ ರಾಜಕೀಯ ವ್ಯಕ್ತಿಯಾಗಿರದೇ ಸಾಮಾಜಿಕ ಕಾರ್ಯಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿಯಾದ ಶಾಂತವೇರಿ ಗೋಪಾಲಗೌಡರು ನಮ್ಮೆಲ್ಲರಿಗೂ ಆದರ್ಶ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಂತವೇರಿ ಗೋಪಾಲಗೌಡ ಜನ್ಮ ಶತಮಾನೋತ್ಸವ ಸಮಿತಿಯ ಕಾರ್ಯದರ್ಶಿಗಳಾದ ಶ್ರೀರಾಮ ಮನೋಹರ ಶಾಂತವೇರಿಯವರು ಮಾತನಾಡಿ, ತಂದೆಯವರಾದ ಶಾಂತವೇರಿ ಗೋಪಾಲಗೌಡರು ಹಲವಾರು ಆದರ್ಶಗಳನ್ನ ಮೈಗೂಡಿಸಿಕೊಂಡಿದ್ದರು. ಶಾಂತವೇರಿ ಗೋಪಾಲಗೌಡ ಜನ್ಮ ಶತಮಾನೋತ್ಸವವನ್ನು ಆಚರಿಸಬೇಕು ಎನ್ನುವುದು ಬಹು ದಿನಗಳ ಕನಸು. ಅದು ಇಂದಿಗೆ ಈಡೇರಿದೆ. ತಂದೆಯವರ ಎಲ್ಲಾ ಬರಹಗಳನ್ನ ಕಲೆಹಾಕಿ ಅದಕ್ಕೆ ಒಂದು ಆಧುನಿಕ ಸ್ಪರ್ಶವನ್ನು ನೀಡಿ ವೆಬ್ಸೈಟ್ ಅನ್ನು ಬಿಡುಗಡೆ ಮಾಡಲಾಗುವುದು. ಈ ಮೂಲಕ ಪುಸ್ತಕ ಪ್ರೇಮಿಗಳು ಶಾಂತವೇರಿ ಗೋಪಾಲಗೌಡರ ಬಗ್ಗೆ ಸುಲಭವಾಗಿ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಒಳ್ಳೆಯ ಆದರ್ಶಗಳನ್ನ ಮೈಗೂಡಿಸಿಕೊಂಡು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬದುಕಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ, ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಚಾರ್ಯರಾದ ಡಾ.ಕೆ.ಬಿ. ಧನಂಜಯ್, ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ ಡಾ. ಹಾಲಮ್ಮ ಎಂ , ಕನ್ನಡ ವಿಭಾಗದ ಸಹಪ್ರಾಧ್ಯಾಪಕರಾದ ಡಾ. ಮೋಹನ್ ಚಂದ್ರಗುತ್ತಿ, ಹಾಗೂ ಇನ್ನಿತರ ಗಣ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...